HomeGadag Newsಜ. 25ರಂದು ಶ್ರೀ ಚನ್ನವೀರ ಶರಣರ ಜಾತ್ರಾ ಮಹೋತ್ಸವ

ಜ. 25ರಂದು ಶ್ರೀ ಚನ್ನವೀರ ಶರಣರ ಜಾತ್ರಾ ಮಹೋತ್ಸವ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮೌನಯೋಗಿ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಮಹಾರಥೋತ್ಸವವು ಜ. 25ರಂದು ಸಂಜೆ 5 ಗಂಟೆಗೆ ಜರುಗುವದು. ಜಾತ್ರಾ ಮಹೋತ್ಸವದ ಅಂಗವಾಗಿ ಮಹಾತ್ಮರ ಜೀವನ ದರ್ಶನ ಪ್ರವಚನ, ಮಹಾರಥೋತ್ಸವ, ಲಘು ರಥೋತ್ಸವ, ಜಾನಪದ ಕಲಾಮೇಳ, ಸಾಮೂಹಿಕ ವಿವಾಹಗಳು, ಸುಮಂಗಲೆಯರಿಗೆ ಉಡಿ ತುಂಬುವದು, ತುಲಾಭಾರ, ಧಾರ್ಮಿಕ ಚಿಂತನಗೋಷ್ಠಿ ಹಾಗೂ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುಕ್ಷೇತ್ರ ಬಳಗಾನೂರಿನ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ ಮಠದ ಪೂಜ್ಯಶ್ರೀ ಶಿವಶಾಂತವೀರ ಶರಣರು ಹೇಳಿದರು.

ಅವರು ನಗರದ ಪತ್ರಿಕಾಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ. 24ರಂದು ಬೆಳಿಗ್ಗೆ 8 ಗಂಟೆಗೆ ಕುಷ್ಟಗಿಯ ಮದ್ದಾನಿ ಹಿರೇಮಠದ ಪೂಜ್ಯಶ್ರೀ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಹಿರೇವಡ್ಡಟ್ಟಿ ಹಿರೇಮಠದ ಪೂಜ್ಯಶ್ರೀ ವೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಷಟಸ್ಥಲ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ 5 ಗಂಟೆಗೆ ಪ್ರಕಾಶ ಜಗದೀಶಪ್ಪ ಹುಗ್ಗಿ ಹಾಗೂ ಶರಣರ ಬಳಗ ರೋಣ ಅವರ ಮಹಾಮನೆಯಿಂದ ರಥದ ಕಳಸ ಆಗಮಿಸುವದು. ಸಂಜೆ 6 ಗಂಟೆಗೆ ಲಘು ರಥೋತ್ಸವ ಜರುಗುವದು.

ಸಂಜೆ 7 ಗಂಟೆಗೆ ಮಹಾತ್ಮರ ಜೀವನ ದರ್ಶನ ಪ್ರವಚನ ಮಂಗಲೋತ್ಸವ ಜರುಗುವದು. ಹೂವಿನ ಹಡಗಲಿ ಗವಿಮಠದ ಪೂಜ್ಯಶ್ರೀ ಡಾ. ಹಿರಿಯ ಶಾಂತವೀರ ಮಹಾಸ್ವಾಮಿಗಳು ಪಾವನ ಸಾನ್ನಿಧ್ಯ ವಹಿಸುವರು. ಅಣದೂರ ನೀಲಕಂಠೇಶ್ವರ ಮಠದ ಪೂಜ್ಯಶ್ರೀ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು, ರಬಕವಿ ಬ್ರಹ್ಮಾನಂದ ಶ್ರೀಮಠದ ಪೂಜ್ಯಶ್ರೀ ಗುರುಸಿದ್ದೇಶ್ವರ ಸ್ವಾಮಿಗಳು ಸಮ್ಮುಖ ವಹಿಸುವರು. ಬಳೂಟಗಿಯ ಹಿರೇಮಠದ ಪೂಜ್ಯಶ್ರೀ ಶಿವಕುಮಾರ ಸ್ವಾಮಿಗಳು ಪ್ರವಚನ ಮಂಗಲದ ನುಡಿ ಆಡುವರು. ಸೋಮನಾಳದ ಶರಣು ಕೆ. ಹಿರೇಮಠ ಸಂಗೀತ ಸೇವೆ ನೀಡುವರು. ಗದುಗಿನ ಪಂಚಾಕ್ಷರಿ ಹೂಗಾರ ತಬಲಾ ಸಾಥ್ ನೀಡುವರು. ಇದೇ ಸಂದರ್ಭದಲ್ಲಿ ಶ್ರೀಮಠದ ಪೂಜ್ಯರಿಗೆ ದಾನಿಗಳಿಂದ ತುಲಾಭಾರದ ಭಕ್ತಿಸೇವೆ ಜರುಗಲಿದೆ ಎಂದರು.

ಜ. 25ರಂದು ಬೆಳಿಗ್ಗೆ 5 ಗಂಟೆಗೆ ಶ್ರೀ ಚನ್ನವೀರ ಶರಣರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಲಿಂಗದೀಕ್ಷೆ, ಅಯ್ಯಾಚಾರ ಜರುಗಲಿದೆ. ಮೈನಳ್ಳಿ ಹಾಗೂ ಬಿಕನಳ್ಳಿ ಹಿರೇಮಠದ ಪೂಜ್ಯಶ್ರೀ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿಯ ವಿಶ್ವನಾಥ ಮಂದಿರದ ವೇ.ಮೂ. ಬಸಯ್ಯ ಶಾಸ್ತ್ರಿಗಳು, ಅಮರಾಪೂರದ ವೇ.ಮೂ. ಶ್ರೀ ಚನ್ನವೀರಯ್ಯ ಶಾಸ್ತ್ರಿಗಳು ಹಾಗೂ ಶ್ರೀಮಠದ ವೈದಿಕ ಪಾಠಶಾಲೆಯ ವಿದ್ಯಾರ್ಥಿಗಳಿಂದ ವೈದಿಕ ಕಾರ್ಯಕ್ರಮಗಳು ಜರುಗುವವು.

ಬೆಳಿಗ್ಗೆ 10 ಗಂಟೆಗೆ ಪೂಜ್ಯಶ್ರೀ ಚನ್ನವೀರ ಶರಣರ ಹರಕೆಯ ತೇರನ್ನು ಪೂಜ್ಯರು ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸುವರು. 10.30 ಗಂಟೆಗೆ ಶ್ರೀ ಚನ್ನವೀರ ಶರಣರ 31ನೇ ಪುಣ್ಯಸ್ಮರಣೋತ್ಸವ ಹಾಗೂ ಕಲ್ಯಾಣ ಮಹೋತ್ಸವ ಜರುಗುವದು. ಈ ಕಾರ್ಯಕ್ರಮದಲ್ಲಿ ಹೊಸಳ್ಳಿ ಬೂದೀಶ್ವರ ಸಂಸ್ಥಾನಮಠದ ಪೂಜ್ಯಶ್ರೀ ಜ. ಬೂದೀಶ್ವರ ಮಹಾಸ್ವಾಮಿಗಳು ಪಾವನ ಸಾನ್ನಿಧ್ಯ ವಹಿಸುವರು. ಅಗಡಿ-ಅಕ್ಕಿಮಠದ ಪೂಜ್ಯಶ್ರೀ ಗುರುಲಿಂಗ ಮಹಾಸ್ವಾಮಿಗಳು, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಸಮ್ಮುಖ ವಹಿಸುವರು. ಗದುಗಿನ ವೆಂಕಟೇಶ ಆಲ್ಕೋಡ ಹಾಗೂ ತಂಡದವರಿಂದ ಭಕ್ತಿಸಂಗೀತ ಕಾರ್ಯಕ್ರಮ ಜರುಗುವುದು.

ಇದೇ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕೌತಾಳದ ಪ್ರಗತಿಪರ ಕೃಷಿ ಮಹಿಳೆ ಡಾ. ಕವಿತಾ ಮಿಶ್ರಾ, ಬಾಗಲಕೋಟೆಯ ಅನ್ನಪೂರ್ಣ ಬಸಯ್ಯ ಬಳೂಲಮಠ ಹಾಗೂ ಬೆಂಗಳೂರಿನ ಕಡಬಗೆರೆ ಮುನಿರಾಜ ಮತ್ತು ತಂಡ ಇವರಿಗೆ ಸಿದ್ದಲಿಂಗನಗೌಡ ಎಸ್. ಜಂಗ್ಲೆಪ್ಪಗೌಡ್ರ ಮೆಮೋರಿಯಲ್ ಉಮಾ ವಿದ್ಯಾಶ್ರೀ ಟ್ರಸ್ಟ್ ನವಲಗುಂದ ಇವರ ಸಂಯುಕ್ತಾಶ್ರಯದಲ್ಲಿ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನಂತರ ಬೆಂಗಳೂರಿನ ಕಡಬಗೆರೆ ಮುನಿರಾಜ ಮತ್ತು ತಂಡದವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರುಗುವದು. ಸಂಜೆ 4 ಗಂಟೆಗೆ ಬಳಗಾನೂರಿನ ಶರಣರ ಬಳಗ ಹಾಗೂ ಡಾ. ಶಿವಕುಮಾರಯ್ಯ ಶಂಕ್ರಯ್ಯ ಹಿರೇಮಠ ಅವರ ಮಹಾಮನೆಯಿಂದ ರಥದ ಹಗ್ಗವನ್ನು ತರಲಾಗುವದು. ಸಂಜೆ 5 ಗಂಟೆಗೆ ಪೂಜ್ಯಶ್ರೀ ಜಗದ್ಗುರುಗಳು, ಹರಗುರು ಚರಮೂರ್ತಿಗಳ ನೇತೃತ್ವದಲ್ಲಿ ಮಹಾರಥೋತ್ಸವ ಜರುಗುವದು.

ಸಂಜೆ 6 ಗಂಟೆಗೆ ಧಾರ್ಮಿಕ ಚಿಂತನಗೋಷ್ಠಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೊಪ್ಪಳ ಸಂಸ್ಥಾನ ಗವಿಮಠದ ಪೂಜ್ಯಶ್ರೀ ಜಗದ್ಗುರು ಗವಿಸಿದ್ದೇಶ್ವರ ಮಹಾಸ್ವಾಮಿಗಳು ಪಾವನ ಸಾನ್ನಿಧ್ಯ ವಹಿಸುವರು. ಹೂವಿನಶಿಗ್ಲಿ ವಿರಕ್ತಮಠದ ಪೂಜ್ಯಶ್ರೀ ಚನ್ನವೀರ ಮಹಾಸ್ವಾಮಿಗಳು ಹಾಗೂ ಕನಕಗಿರಿ ಸುವರ್ಣಗಿರಿ ವಿರಕ್ತಮಠದ ಪೂಜ್ಯಶ್ರೀ ಡಾ. ಚನ್ನಮಲ್ಲ ಮಹಾಸ್ವಾಮಿಗಳು ಉಪದೇಶಾಮೃತ ನೀಡುವರು.

ಹೆಬ್ಬಾಳ ಬ್ರಹ್ಮಮಠದ ಪೂಜ್ಯಶ್ರೀ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಸುಕ್ಷೇತ್ರ ಗುಡದೂರಿನ ಪೂಜ್ಯಶ್ರೀ ನೀಲಕಂಠ ತಾತನವರು, ಖಜ್ಜಿಡೋಣಿಯ ಪೂಜ್ಯಶ್ರೀ ಕೃಷ್ಣಾನಂದ ಶಾಸ್ತ್ರಿಗಳು ಸಮ್ಮುಖ ವಹಿಸುವರು. ದಿಯಾ ಪೀರಸಾಬ ಕೌತಾಳ ಅವರಿಂದ ಸಂಗೀತ ಕಾರ್ಯಕ್ರಮ ನಡೆಯುವದು. ಬೆಂಗಳೂರು ಆಕಾಶವಾಣಿಯ ನಿರೂಪಕಿ ಸವಿತಾ ಶಿವಕುಮಾರ ಕಾರ್ಯಕ್ರಮ ನಿರೂಪಿಸುವರು.

ಜ. 26ರಂದು ಸಂಜೆ 5 ಗಂಟೆಗೆ ಕಡುಬಿನ ಕಾಳಗ ಹಾಗೂ ಶ್ರೀ ಶರಣರ ಬೆಳ್ಳಿಮೂರ್ತಿ ಉತ್ಸವ ಜರುಗುವದು. ಸುಕ್ಷೇತ್ರ ಬಳಗಾನೂರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀ ಚನ್ನವೀರ ಶರಣರ ಬೆಳ್ಳಿಮೂರ್ತಿ ಉತ್ಸವ ಜರುಗುವದು. ನಂತರ ಶ್ರೀಮಠದಲ್ಲಿ ಕಡುಬಿನ ಕಾಳಗ ಜರುಗುವದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎ.ಎನ್. ನಾಗರಳ್ಳಿ, ವಿ.ಬಿ. ಪೊಲೀಸಪಾಟೀಲ, ಎಂ.ಬಿ. ಸಿಕ್ಕೆದೇಸಾಯಿ, ವಿ.ಎಸ್. ಹಿರೇಮಠ, ಎಸ್.ಬಿ. ಪಾಟೀಲ, ಎಸ್.ಎಸ್. ಪಾಟೀಲ, ಶಿವಲಿಂಗಯ್ಯ ಶಾಸ್ತ್ರಿಗಳು ಹಿರೇಮಠ ಸಿದ್ದಾಪೂರ, ವಸಂತಮೇಟಿ, ಶೇಖಣ್ಣ ಗದ್ದಿಕೇರಿ, ಮನ್ನಾಪೂರ, ಗೌರಿಪೂರ, ವೈ.ಬಿ. ಡೊಳ್ಳಿನ, ಎಚ್.ಎಸ್. ವೆಂಕಟಾಪೂರ ಮುಂತಾದವರು ಉಪಸ್ಥಿತರಿದ್ದರು.

ಜ. 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಗಾಯಕರಾದ ಡಾ. ಶ್ರೀರಾಮ ಕಾಸರ್ ಮತ್ತು ತಂಡದವರಿಂದ ರಸಮಂಜರಿ ಹಾಗೂ ಚಲನಚಿತ್ರ ನಟ ಪ್ರವೀಣ ಗಸ್ತಿ ಮತ್ತು ಕಾಮಿಡಿ ಕಿಲಾಡಿಗಳಿಂದ ಹಾಸ್ಯ ಸಂಜೆ ಜರುಗುವದು. ರಾತ್ರಿ 9 ಗಂಟೆಗೆ ಸಿಡಿಮದ್ದು ಸುಡುವ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಬಳ್ಳಾರಿಯ ಅಭಿನಯ ಕಲಾಕೇಂದ್ರ ಅವರಿಂದ ಅಲ್ಲಿಪುರದ ಮಹಾದೇವ ತಾತನವರ ಭಕ್ತಿ ಪ್ರಧಾನ ನಾಟಕ ಪ್ರದರ್ಶನವಾಗಲಿದೆ ಎಂದು ಪೂಜ್ಯ ಶ್ರೀಗಳು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!