ಕನ್ನಡ ಸಾಹಿತ್ಯಕ್ಕೆ ಜನಪದದ ಕೊಡುಗೆ ಅಪಾರ

0
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಕನ್ನಡ ಸಾಹಿತ್ಯ ಎಲ್ಲ ಸಾಹಿತ್ಯಗಳಿಗಿಂತ ಶ್ರೇಷ್ಠವಾದದ್ದು. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದ್ದು, ಕನ್ನಡದ ಕುವೆಂಪು, ದ.ರಾ. ಬೇಂದ್ರೆ, ಮಾಸ್ತಿ ಅವರ ಕೊಡುಗೆ ಅಪಾರವಾಗಿದೆ. ಕನ್ನಡವನ್ನು ಲಿಪಿಗಳ ರಾಣಿ ಎಂದು ಕರೆಯಲಾಗುತ್ತದೆ. ಕನ್ನಡ ಸಾಹಿತ್ಯಕ್ಕೆ ಜನಪದದ ಕೊಡುಗೆ ಅಪಾರ ಎಂದು ಕೊಟ್ರಯ್ಯ ಹೊಂಬಾಳ್ಮಠ ಹೇಳಿದರು.

Advertisement

ಅವರು ಶಿರಹಟ್ಟಿ ತಾಲೂಕಿನ ಬನ್ನಿಕೊಪ್ಪ ಗ್ರಾಮದ ಶ್ರೀ ಜ.ಅ. ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಪ್ರೌಢಶಾಲೆಯಲ್ಲಿ ಶಿರಹಟ್ಟಿ ತಾಲೂಕಾ ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ನಿವೃತ್ತ ಶಿಕ್ಷಕ ಬಿ.ಎಂ. ಯರಕದ ಕಾರ್ಯಕ್ರಮ ಉದ್ಘಾಟಿಸಿದರು. ವೈ.ಬಿ. ಪಾಟೀಲ, ನವೀನಕುಮಾರ ಅಳವಂಡಿ, ಬಿ.ಎಂ. ಈಟಿ, ಎ.ಎಸ್. ಮಠದ, ಮಲ್ಲೇಶ ಭಜಂತ್ರಿ, ಎಂ.ಕೆ. ರೋಣದ, ಅರುಣ ರಾವಣಕಿ, ಕುಮಾರ ಕಲ್ಮಠ, ಅಂಬಿಕಾ ಕಮ್ಮಾರ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here