ಬೆಂಗಳೂರು: ಹೆಚ್ಡಿ ಕುಮಾರಸ್ವಾಮಿಕ್ಕೆ ನಿವಾಸದ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ ಆರೋಪ ಕೇಳಿಬಂದಿತ್ತು. ಇದಕ್ಕೆ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ನೋಟಿಸ್ ನೀಡಲಿ, ದಂಡ ಕಟ್ಟುತ್ತೇನೆಂದು ಎಂದರು. ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
Advertisement
ನಮ್ಮ ಸೋಷಿಯಲ್ ಮೀಡಿಯಾ ತಂಡ ಅದರ ಡ್ಯೂಟಿ ಮಾಡಿದೆ. ಅಚಾತುರ್ಯವೋ, ಕಳ್ಳತನವೋ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಸ್ಕಾಂ ಏನು ಕಾನೂನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ. ಇದಕ್ಕೆ ನಾವು ಮಧ್ಯಪ್ರವೇಶ ಮಾಡುವ ಅವಶ್ಯಕತೆ ಇಲ್ಲ. ಕಾಂಪೌಂಡ್ ನಾನು ಹಾಕಿದ್ನಾ, ಅವರು ಹಾಕಿದರೋ ದೂರು ಕೊಡಲಿ. ಅಸೂಯೆಗೆ ಮದ್ದಿಲ್ಲ, ಪಾಪ ಕುಮಾರಸ್ವಾಮಿಗೆ ತಡೆದುಕೊಳ್ಳಲು ಆಗ್ತಿಲ್ಲ ಎಂದು ವಾಗ್ದಾಳಿ ಮಾಡಿದರು.