HomeGadag Newsಪ್ರಜಾಪ್ರಭುತ್ವ ಬಲಪಡಿಸಲು ಕೈ ಜೋಡಿಸಿ : ಎಸ್.ಭರತ್

ಪ್ರಜಾಪ್ರಭುತ್ವ ಬಲಪಡಿಸಲು ಕೈ ಜೋಡಿಸಿ : ಎಸ್.ಭರತ್

Spread the love

ವಿಜಯಸಾಕ್ಷಿ ಸುದ್ದಿ, ಗದಗ : ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನವು `ಬೈಸಿಕಲ್ ಜಾಥಾ’ ಮೂಲಕ ಮಂಗಳವಾರ ಜರುಗಿತು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದ ಮುಂಭಾಗ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ ಸಿಇಒ ಎಸ್. ಭರತ್ ಅವರು ಬೈಸಿಕಲ್‌ನಲ್ಲಿ ಸಂಚರಿಸುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಇದೇ ಮೇ 7ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಅರ್ಹರೆಲ್ಲರೂ ತಪ್ಪದೇ ಮತ ಚಲಾಯಿಸಿ. ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನಕ್ಕೆ ಸಹಕರಿಸಬೇಕು. 18 ವರ್ಷ ಪೂರ್ಣಗೊಂಡ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವ ಬಲಪಡಿಸಲು ಕೈ ಜೋಡಿಸಬೇಕು ಎಂದು ಕೋರಿದರು.

ಕಡ್ಡಾಯವಾಗಿ ಮತದಾನ ಮಾಡಿ-ಪ್ರಜಾಪ್ರಭುತ್ವ ಬಲಪಡಿಸಿ, ನಮ್ಮ ಮತ-ನಮ್ಮ ಹಕ್ಕು, ಮತದಾರರು ಮತದಾನದಿಂದ ಹೊರಗುಳಿಯಬಾರದು, ಪ್ರತಿಶತ ಮತದಾನ–ಉತ್ತಮ ಸಮಾಜ ನಿರ್ಮಿಸಿ, ಮತದಾನಕ್ಕಿಂತ ಮತ್ತೊಂದಿಲ್ಲ, ಕಡ್ಡಾಯವಾಗಿ ಮತದಾನ ಮಾಡುತ್ತೇವೆ ಎಂಬ ಘೋಷವಾಕ್ಯಗಳು ಮೊಳಗಿದವು.
ಜಿ.ಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.

ಬೈಸಿಕಲ್ ಜಾಥಾದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಮನ ಸೆಳೆದರು. ಬೈಸಿಕಲ್ ಜಾಥಾವು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭಗೊಂಡು ಪಂಚಾಕ್ಷರಿ ನಗರದ ಶುದ್ಧ ಕುಡಿಯುವ ನೀರಿನ ಘಟಕ, ಚೇತನ ಕ್ಯಾಂಟೀನ್, ಹಾತಲಗೇರಿ ನಾಕಾ, ಬಳ್ಳಾರಿ ಗೇಟ್, ಕುರಹಟ್ಟಿ ಪೇಟೆ, ಟೆಂಗಿನಕಾಯಿ ಬಜಾರ, ಜರ್ಮನ್ ಆಸ್ಪತ್ರೆ, ಸಹಸ್ರಾರ್ಜುನ ವೃತ್ತ, ಮಹಾರಾಣ ಪ್ರತಾಪ ಸಿಂಹ ವೃತ್ತ, ಹಳೇ ಕೋರ್ಟ್ ವೃತ್ತ, ಗಾಂಧಿ ವೃತ್ತ, ರೋಟರಿ ವೃತ್ತ, ಭೂಮರಡ್ಡಿ ವೃತ್ತದ ಮೂಲಕ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಿತು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!