ಮದುವೆಯಾದ ಮೂರೇ ತಿಂಗಳಿಗೆ ರೈಲಿಗೆ ತಲೆ ಕೊಟ್ಟು ಸೊಸೈಡ್ ಮಾಡಿಕೊಂಡ ಪತ್ರಕರ್ತೆ!

0
Spread the love

ಭುವನೇಶ್ವರ:- ಮದುವೆಯಾದ ಮೂರೇ ತಿಂಗಳಿಗೆ ರೈಲಿಗೆ ತಲೆ ಕೊಟ್ಟು ಪತ್ರಕರ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಭುವನೇಶ್ವರದಲ್ಲಿ ಜರುಗಿದೆ.

Advertisement

ಸ್ಥಳೀಯ ಸುದ್ದಿ ಮಾಧ್ಯಮದಲ್ಲಿ ಮೃತ ಮಧುಮಿತಾ ಪರಿದಾ ಕಾಪಿ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು ಎನ್ನಲಾಗಿದೆ. ಸಾವಿಗೂ ಮುನ್ನ ವಿಡಿಯೋ ಮಾಡಿಕೊಂಡಿದ್ದು, ವಿಡಿಯೋದಲ್ಲಿ ಪತಿಯ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾಳೆ.

ಸಾವಿಗೂ ಮುನ್ನ ತನ್ನ ಪತಿಯಿಂದ ಉಂಟಾದ ಕಿರುಕುಳ ಬಗ್ಗೆ ಹೇಳಿಕೊಂಡಿದ್ದು, ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಲಿಂಗಪುರ ಪ್ರದೇಶದಲ್ಲಿದ್ದ ದೇವಸ್ಥಾನದ ಬಳಿಯ ರೈಲ್ವೇ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಘಟನೆ ರಾತ್ರಿ 7.30 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ಮಧುಮಿತಾ ಸಾವಿನ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಮಧುಮಿತಾ ಪತಿಗೆ ಆಕೆಯ ಸಂಬಂಧಿಕರು ಸ್ಥಳದಲ್ಲೇ ಥಳಿಸಿದ್ದಾರೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here