ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರು ಹಾಗೂ ಮೈಸೂರು ಸಂಸ್ಥಾನದ ಜನಪರ ದೊರೆಯಾಗಿದ್ದ ರಾಜರ್ಷಿ ಕೃಷ್ಣರಾಜ ಒಡೆಯರ ಅವರ 141ನೇ ಜಯಂತ್ಯುತ್ಸವವನ್ನು ಕಸಾಪ ಕಾರ್ಯಾಲಯದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ಜೂನ್ 4ರಂದು ಸಂಜೆ 6.30ಕ್ಕೆ ಆಯೋಜಿಸಲಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಕೊಡುಗೆ ಕುರಿತು ಶಿರಹಟ್ಟಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಬಸವರಾಜ ಗಿರಿತಿಮ್ಮಣ್ಣವರ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಕೆ.ವಿ.ಎಸ್.ಆರ್. ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ವಿ.ಎಸ್. ದಲಾಲಿ ಭಾಗವಹಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು.
ಕಾರ್ಯಕ್ರಮದಲ್ಲಿ ಪರಿಷತ್ತಿನ ಎಲ್ಲ ಸದಸ್ಯರು, ಸಾಹಿತಿಗಳು, ಕನ್ನಡಾಭಿಮಾನಿಗಳು ಭಾಗವಹಿಸಬೇಕೆಂದು ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ, ಡಿ.ಎಸ್. ಬಾಪುರಿ ಪ್ರಕಟನೆಯಲ್ಲಿ ಕೋರಿದ್ದಾರೆ.