ಕಲುಬುರಗಿ: ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನೀರು ಪಾಲು!

0
Spread the love

ಕಲುಬುರಗಿ: ರಾಜ್ಯದ ಹಲವೆಡೆ ಮಳೆಯ ಆರ್ಭಟ ಹೆಚ್ಚಾಗಿದ್ದು, ಈ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ನೀರಿನಲ್ಲಿ ಇಳಿಯುವುದನ್ನು ಬಹುತೇಕ ಕಡೆಗಳಲ್ಲಿ ನಿಷೇಧಿಸಲಾಗಿದೆ. ಆದ್ರೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿ ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.

Advertisement

ಪ್ರಕಾಶ್ (15) ಮತ್ತು ಸೋನು‌ (16) ಎಂಬ ಮೃತ ಬಾಲಕರಾಗಿದ್ದು, ಸೋನು ಎನ್ನುವ ಬಾಲಕ ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದಿದ್ದಾನೆ. ಕೂಡಲೇ ಪ್ರಕಾಶ್ ಆತನನ್ನ ಕಾಪಾಡಲು ಮುಂದಾಗಿದ್ದ. ಈ ವೇಳೆ ಇವನು ನದಿಯಲ್ಲಿ ಬಿದ್ದು ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ, ಎಸ್​ಡಿಆರ್​ಎಫ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here