HomeIndia Newsಕರ್ನಾಟಕದ ಎಲ್ಲೆಡೆ ಕಂಬಳಕ್ಕೆ ಅವಕಾಶ: ಪೆಟಾ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಕರ್ನಾಟಕದ ಎಲ್ಲೆಡೆ ಕಂಬಳಕ್ಕೆ ಅವಕಾಶ: ಪೆಟಾ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

For Dai;y Updates Join Our whatsapp Group

Spread the love

ನವದೆಹಲಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಇತರ ಭಾಗಗಳಲ್ಲಿ ‘ಕಂಬಳ’ ಕ್ರೀಡೆಯನ್ನು ನಡೆಸುವುದನ್ನು ತಡೆಯುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೆಟಾ) ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಈ ಅರ್ಜಿಯಲ್ಲಿ ನವೆಂಬರ್ 14ರಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಲಾಗಿತ್ತು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರಗಿನ ಯಾವುದೇ ಪ್ರದೇಶಗಳಲ್ಲಿ ಕಂಬಳ ನಡೆಸಲು ರಾಜ್ಯ ಸರ್ಕಾರ ಅವಕಾಶ ನೀಡಬಾರದು ಎಂಬ ಬೇಡಿಕೆಯನ್ನು ಹೈಕೋರ್ಟ್ ಈಗಾಗಲೇ ತಿರಸ್ಕರಿಸಿತ್ತು.

ವಿಚಾರಣೆ ವೇಳೆ ನ್ಯಾಯಮೂರ್ತಿ ಸಂದೀಪ್ ಮೆಹ್ತಾ, ರಾಜ್ಯದ ವಿವಿಧ ಭಾಗಗಳಲ್ಲಿ ಸಂಸ್ಕೃತಿಯನ್ನು ಪ್ರದರ್ಶಿಸಲು ಜನರು ಬಯಸಿದರೆ ಅದರಲ್ಲಿ ತಪ್ಪೇನು? ಇತರ ಭಾಗದ ಜನರೂ ಈ ಸಂಸ್ಕೃತಿಯನ್ನು ತಿಳಿದುಕೊಳ್ಳಬಹುದು. ಅದನ್ನು ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಪೆಟಾ ಪರ ವಕೀಲರು, ಕಂಬಳವು ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾಗಿದೆ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್‌ ಅನ್ನು ಉಲ್ಲೇಖಿಸಿದರು.

ಇದಕ್ಕೆ ಪ್ರತಿಯಾಗಿ, ಬೆಂಗಳೂರಿನ ಸಂಪ್ರದಾಯ ಮತ್ತು ಸಂಸ್ಕೃತಿಗೆ ಕಂಬಳಕ್ಕೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿದರು. ಈಗ ಈ ಕ್ರೀಡೆಯನ್ನು ರಾಜ್ಯ ರಾಜಧಾನಿಯಲ್ಲೂ ನಡೆಸಲು ಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.

ವಿಚಾರಣೆ ಅಂತ್ಯದಲ್ಲಿ ಸುಪ್ರೀಂ ಕೋರ್ಟ್ ಪೆಟಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದೇ ವೇಳೆ ಇಂತಹ ವಿಷಯಗಳ ಕುರಿತು ಮುಂದಿನ ದಿನಗಳಲ್ಲಿ ಪೆಟಾಗೆ ಕೆಲ ಪ್ರಶ್ನೆಗಳು ಕೇಳಬಹುದು ಎಂದು ಪೀಠವು ಅಭಿಪ್ರಾಯಪಟ್ಟಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!