HomeKarnataka Newsಕನಕದಾಸರು ವಿಶ್ವ ಮಾನವ, ಸಮಾಜ ಸುಧಾರಕರು: ಸಿಎಂ ಸಿದ್ದರಾಮಯ್ಯ

ಕನಕದಾಸರು ವಿಶ್ವ ಮಾನವ, ಸಮಾಜ ಸುಧಾರಕರು: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

ಬೆಂಗಳೂರು: ಕನಕದಾಸರು ಸಂತರಷ್ಟೇ ಅಲ್ಲದೇ ದಾರ್ಶನಿಕರೂ, ಸಮಾಜ ಸುಧಾರಕರೂ ಆಗಿದ್ದರು. ವಿಶ್ವಮಾನವರೂ ಆಗಿದ್ದ ಅವರ ಜಯಂತ್ಯೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕನಕದಾಸ ಜಯಂತಿ ಅಂಗವಾಗಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭಕ್ತ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ಜನಿಸಿದರು. ಕಾಗಿನೆಲೆ ಅವರ ಕರ್ಮಭೂಮಿ. ಕಾವ್ಯ, ಕೀರ್ತನೆಗಳನ್ನು ರಚನೆ ಮಾಡಿದ್ದರು ಎಂದು ವಿವರಿಸಿ ನಾಡಿನ ಎಲ್ಲಾ ಜನರಿಗೂ ಕನಕ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img