ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸುಣಗಾರ ಓಣಿಯಲ್ಲಿ ಗದಗ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

Advertisement

ಸಭೆಯ ಅಧ್ಯಕ್ಷತೆಯನ್ನು ಸಮಾಜ ಸಂಘಟನೆಯ ಜಿಲ್ಲಾಧ್ಯಕ್ಷ ರಾಮಣ್ಣ ಇರಕಲ್ಲ ವಹಿಸಿ ಮಾತನಾಡಿ, ಕನ್ನಡ ಭಾಷೆ ಮಾತನಾಡುವ ನಾವೆಲ್ಲರೂ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಧ್ಯೇಯವಾಕ್ಯದಿಂದ ಕನ್ನಡ ಉಳಿಸಿ, ಕನ್ನಡ ಬೆಳೆಸಿರಿ ಎಂದರು.

ಸಮಾಜ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹಾದಿಮನಿ ಮಾತನಾಡಿ, ಮಕ್ಕಳ ಸಾಂಸ್ಕೃತಿಕ ವೇಷ-ಭೂಷಣ ನಾಡಿನ ಪರಂಪರೆಯನ್ನು ಬಿಂಬಿಸುತ್ತದೆ. ನಾಡಿನ ಕಲೆ, ಸಾಹಿತ್ಯ, ವಾಸ್ತುಶಿಲ್ಪ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಶಿಕ್ಷಕರಾದ ಬಸವರಾಜ ಹಾಗೂ ದೀನಬಂಧು ಆದಿ ಕನ್ನಡ ನಾಡು-ನುಡಿ ಹಾಗೂ ಕನ್ನಡ ಪ್ರೀತಿಯ ಅಕ್ಕರೆಯ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಹರೀಶ ಬಾರಕೇರ, ಮಂಜುನಾಥ ಗುಡಿಸಾಗರ, ರಾಜು ಪೂಜಾರ, ಮಹಿಳಾ ಸಂಘಟನೆಯ ಅಧ್ಯಕ್ಷ ಸುಜಾತ ಗುಡಿಸಾಗರ, ಆನಂದ ಸುಣಗಾರ, ದೇವು ನವಲಗುಂದ, ಗಿರಿಜಾ ಬಾರಕೇರ, ಕವಿತಾ ಗುಡಿಸಾಗರ, ಸೌಮ್ಯ ಸುಣಗಾರ ಮಹಿಳಾ ಸಂಘಟನೆಯ ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here