HomeGadag Newsಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ನಡೆ ಖಂಡನೀಯ: ದುರಗಪ್ಪ ಆರೋಪ

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ನಡೆ ಖಂಡನೀಯ: ದುರಗಪ್ಪ ಆರೋಪ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದಲ್ಲಿ ನಡೆದ ಲಕ್ಷ್ಮೇಶ್ವರ ತಾಲೂಕು ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಶಿರಹಟ್ಟಿ ಮತಕ್ಷೇತ್ರದ ೨೦೨೩ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರು ಹಾಗೂ ದಲಿತ ಸಮುದಾಯದ ಯುವ ನಾಯಕಿ ಶ್ರೀಮತಿ ಸುಜಾತ ಎನ್. ದೊಡ್ಡಮನಿ ಅವರ ಹೆಸರನ್ನು ಸೇರಿಸದಿರುವುದು ಖಂಡನೀಯ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದುರಗಪ್ಪ ಎಲ್ ಹರಿಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿದ ಅವರು, ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಸಮಾಜಸೇವಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ಹೆಸರನ್ನು ಸೇರಿಸಲಾಗಿದೆ. ಆದರೆ ಸುಜಾತ ದೊಡ್ಡಮನಿ ಅವರ ಹೆಸರನ್ನು ಕೈಬಿಟ್ಟಿರುವುದು ಏಕೆ ಎಂಬುದನ್ನು ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಈಶ್ವರ ಎಸ್. ಮಡ್ಲೇರಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಹಿತ್ಯ ಸಮ್ಮೇಳನಗಳು ಜಾತ್ಯಾತೀತ ಮತ್ತು ವ್ಯಕ್ತಿರಹಿತವಾಗಿರಬೇಕು. ಸುಜಾತ ದೊಡ್ಡಮನಿ ಅವರು ಶಿರಹಟ್ಟಿ ಮತಕ್ಷೇತ್ರದ ನಗರ ಹಾಗೂ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾವಿ ನಾಯಕಿಯ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಸೇರಿಸದಿರುವುದಕ್ಕೆ ಪ್ರಮುಖ ಕಾರಣವೇನು ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಜಾತ್ಯಾತೀತ ನಾಯಕಿ ಸುಜಾತ ದೊಡ್ಡಮನಿ ಅವರ ಹೆಸರನ್ನು ಕೈಬಿಟ್ಟು ಅವಮಾನ ಮಾಡಿರುವುದು ಅವರ ಅಭಿಮಾನಿಗಳು ಹಾಗೂ ದಲಿತ ಸಮುದಾಯಕ್ಕೆ ನೋವುಂಟು ಮಾಡಿದೆ. ಸುಜಾತ ದೊಡ್ಡಮನಿ ಅವರ ಅಭಿಮಾನಿಗಳ ಬಳಗ ಮತ್ತು ದಲಿತ ಸಮುದಾಯದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಲಕ್ಷ್ಮೇಶ್ವರ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಈಶ್ವರ ಮಡ್ಲೇರಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ದುರಗಪ್ಪ ಎಲ್ ಹರಿಜನ ಎಚ್ಚರಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!