ಕರ್ನಾಟಕದಲ್ಲಿ MES ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ: ಕರವೇ ನಾರಾಯಣಗೌಡ ಎಚ್ಚರಿಕೆ

0
Spread the love

ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ ಎಂದು ಕರವೇ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ಒಬ್ಬ ಚಾಲಕ, ನಿರ್ವಾಹಕರನ್ನು ಬಸ್​ನಿಂದ ಕೆಳಗಿಳಿಸಿ ಬಣ್ಣ ಹಾಕಿ, ಅವರಿಗೆ ಹಾರ ಹಾಕಿ ಜೈ ಮಹಾರಾಷ್ಟ್ರ ಅಂತಾ ಘೋಷಣೆ ಕೂಗಿಸುತ್ತೀರಿ. ಇಡೀ ಬೆಳಗಾವಿಯಲ್ಲಿರುವ ಪ್ರತಿಯೊಬ್ಬ ಮರಾಠಿಗನ ಬಾಯಿಯಿಂದಲೂ ಕರ್ನಾಟಕಕ್ಕೆ ಜೈ ಎನಿಸುವ ಕಾಲ ಬೇಗ ಬರುತ್ತದೆ.

ಇದನ್ನೆಲ್ಲ ಬಿಟ್ಟು ಬಿಡಿ. ಬೆಳಗಾವಿಯಲ್ಲಿ ಎಂಇಎಸ್ ಸಂಪೂರ್ಣ ಅಂತ್ಯವಾಗಿದೆ. ಆ ಹೊಟ್ಟೆ ಉರಿಗೆ ಇಂಥ ಆಟ ಶುರು ಮಾಡಿದ್ದಾರೆ. ಬೆಳಗಾವಿ ಅಷ್ಟೇ ಅಲ್ಲದೇ ಇಡೀ ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here