ಲೂಟಿಕೋರರು, ದರೋಡೆಕೋರರಿಗೆ ಕರ್ನಾಟಕ ಸ್ವರ್ಗವಾಗಿದೆ: TA ಶರವಣ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆ ಎಂದು MLC ಶರವಣ ವ್ಯಂಗ್ಯವಾಡಿದ್ದಾರೆ.

Advertisement

ರಾಜ್ಯದಲ್ಲಿ ನಡೆದ ಸರಣಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಲೂಟಿಕೋರರು, ದರೋಡೆಕೋರರಿಗೆ ಸ್ವರ್ಗವಾಗಿದೆ. ಗೃಹ ಇಲಾಖೆ ಸತ್ತು ಹೋಗಿದೆ ಎಂದು ಜನ ಪ್ರಶ್ನೆ ಮಾಡ್ತಿದ್ದಾರೆ. 4-5 ದಿನಗಳಿಂದ ಬೀದರ್, ಮಂಗಳೂರು, ಮೈಸೂರು ಭಾಗದಲ್ಲಿ ದರೋಡೆ, ಲೂಟಿ ಕೇಸ್‌ಗಳು ಆಗಿವೆ. ಬೆಂಗಳೂರಿನಲ್ಲಿ ಜ್ಯುವೆಲರಿ ಶಾಪ್‌ನಲ್ಲಿ 8.5 ಕೆಜಿ ಚಿನ್ನ ಲೂಟಿ ಮಾಡಿದ್ದಾರೆ. ನನ್ನ ಅಂಗಡಿ ಚಿನ್ನ ಹಾಲ್ ಮಾರ್ಕ್‌ಗೆ ಕೊಟ್ಟಾಗ ಚಿನ್ನ ಕಳ್ಳತನ ಆಗಿದೆ. ಕರ್ನಾಟಕದಲ್ಲಿ ಜನರು ಸುರಕ್ಷಿತವಾಗಿಲ್ಲ. ಎಲ್ಲರೂ ಭಯಭೀತರಾಗಿದ್ದಾರೆ. ಗೃಹ ಸಚಿವರು ಮನೆ ಬಿಟ್ಟು ಹೊರೆಗೆ ಬಂದು ಪೊಲೀಸ್ ವ್ಯವಸ್ಥೆ ಬಿಗಿ ಮಾಡ್ತಿಲ್ಲ ಎಂದು ಗೃಹ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರು ಬೆಳಗಾವಿಯಲ್ಲಿ ಗಾಂಧಿ ಸಮಾವೇಶ ಮಾಡಿ ಜಪ, ಶಾಂತಿ ಅಂತ ಮಾತಾಡ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಪವರ್ ಫೈಟ್ ಜೋರಾಗಿದೆ. ಇದರಲ್ಲಿ ಈ ಸರ್ಕಾರ ಮುಳುಗಿ ಕಾನೂನು ಸುವ್ಯವಸ್ಥೆ ಕಾಪಾಡ್ತಿಲ್ಲ. ಇವತ್ತು ಕ್ರೈಂ ಜಾಸ್ತಿ ಆಗೋಕೆ ಈ ಸರ್ಕಾರ ಕಾರಣ. ಪೊಲೀಸ್ ವ್ಯವಸ್ಥೆ ಹದಗೆಟ್ಟಿದೆ. ಸಮಾಜಘಾತುಕ ಶಕ್ತಿಗಳಿಗೆ ಈ ಸರ್ಕಾರದಲ್ಲಿ ಭಯ ಇಲ್ಲದಂತೆ ಆಗಿದೆ. ಹಾಡುಹಗಲೆ ಕೊಲೆ ಆಗ್ತಿದೆ. ಬೆಂಗಳೂರು ಸೇಫ್ ಸಿಟಿ ಅಂತ ಇತ್ತು‌. ಈಗ ಕ್ರೈಂ ಸಿಟಿ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here