ದೆಹಲಿಯ ಸ್ಪೋಟ ಬೆನ್ನಲ್ಲೇ ಕರ್ನಾಟಕದಲ್ಲಿ ಕಟ್ಟೆಚ್ಚರ; ಬೆಂಗಳೂರಿನ ಏರ್​ಪೋರ್ಟ್​, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್!

0
Spread the love

ಬೆಂಗಳೂರು:- ದೆಹಲಿಯ ಸ್ಪೋಟ ಬೆನ್ನಲ್ಲೇ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನ ಏರ್​ಪೋರ್ಟ್​, ರೈಲು ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Advertisement

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದ್ದು, ಏರ್​ಪೋರ್ಟ್​ಗೆ ಬರುವ & ಹೋಗುವ ವಾಹನಗಳ ಮೇಲೆ‌‌ ಹದ್ದಿನಕಣ್ಣಿಡಲಾಗಿದೆ. ಏರ್ಪೋಟ್ ಭದ್ರತೆಗೆ ಹೆಚ್ಚುವರಿ ಶಸ್ತ್ರ ಸಜ್ಜಿತ ಸಿಐಎಸ್ಎಫ್​ ನಿಯೋಜನೆ ಜೊತೆಗೆ ವಿಮಾನ ನಿಲ್ದಾಣದ ಒಳ & ಹೊರ ಆವರಣದಲ್ಲಿ ಪ್ಯಾಟ್ರೋಲಿಂಗ್ ಗಸ್ತು ಹೆಚ್ಚಳ ಮಾಡಲಾಗಿದೆ. ಏರ್​ಪೋರ್ಟ್​ಗೆ ಬರುವ ಪ್ರಯಾಣಿಕರು, ಸಿಬ್ಬಂದಿಯ ತಪಾಸಣೆ ಮಾಡಲಾಗುತ್ತಿದೆ. ಪಾರ್ಕಿಂಗ್ ಏರಿಯಾ ಸೇರಿ ಎಲ್ಲೆಡೆ ಭದ್ರತಾ ಪಡೆ ‌ ಅಲರ್ಟ್ ಆಗಿದೆ.

ಮೆಜೆಸ್ಟಿಕ್​ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ​ ಬಳಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ಜೊತೆಗೆ ಶ್ವಾನದಳದಿಂದ ರೈಲು ನಿಲ್ದಾಣ ಸುತ್ತಮುತ್ತ ಪರಿಶೀಲನೆ ನಡೆಸಲಾಗಿದೆ. ಮೆಜೆಸ್ಟಿಕ್​ ಸುತ್ತಮುತ್ತ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, ಬಸ್​​​​ ನಿಲ್ದಾಣ, ರೈಲ್ವೆನಿಲ್ದಾಣದಲ್ಲಿ ಹೆಚ್ಚುವರಿ ಪೊಲೀಸರನ್ನ ನೇಮಿಸಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಬೆಂಗಳೂರಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


Spread the love

LEAVE A REPLY

Please enter your comment!
Please enter your name here