ಸ್ವಾತಂತ್ರ ಹೋರಾಟದ ಮೊದಲು ಕಿಚ್ಚು ಹಚ್ಚಿದ್ದೇ ಕರ್ನಾಟಕ: ಡಿಕೆ ಶಿವಕುಮಾರ್

0
Spread the love

ಬೆಂಗಳೂರು: ಸ್ವತಂತ್ರೋತ್ಸವ ಅಂದ್ರೆ ಇತಿಹಾಸ ನೆನಪಿಸುವ ದಿನ. ಹಿಂದೆ ಹೇಗೆ ಇದ್ದೆವು, ಈಗ ಹೇಗೆ ಇದ್ದೇವೆ ಎಂಬ ಅವಲೋಕನದ ದಿನ ಎಂದು ಡಿಕೆ ಶಿವಕುಮಾರ್ ಹೇಳಿದರು.  ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಎಂದರೆ ಬೆಲೆಕಟ್ಟಿ ಪಡೆಯುವ ವಸ್ತವಲ್ಲ. ಅದು ನಮ್ಮ ಉಸಿರು. ಇದನ್ನು ‌ಮಹತ್ಮಾ ಗಾಂಧಿ ಹೇಳಿದ್ದಾರೆ. ಈ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಈ ದೇಶಕ್ಕೆ ಸ್ವತಂತ್ರ ತಂದ ಪಕ್ಷ. ಈ ಪಕ್ಷದಲ್ಲಿ ಇದ್ದೇವೆ ಅನ್ನುವುದೇ ಒಂದು ರೀತಿಯಲ್ಲಿ ನಮಗಿರುವ ಹೆಮ್ಮೆಯಾಗಿದೆ ಎಂದರು.

Advertisement

ಇನ್ನೂ ಜವಹರಲಾಲ್‌ ನೆಹರು, ವಲ್ಲಭಭಾಯಿ ಪಟೇಲ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ ಎಂಬ ಸುಳ್ಳು ಸುದ್ದಿ ಗಮನಿಸಿದ್ದೇವೆ. ಈ ಹೋರಾಟಕ್ಕಾಗಿ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಅವರನ್ನು ನಾವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು. ದೇಶದಲ್ಲಿ ಅನೇಕ ನಕಲಿ ದೇಶ ಭಕ್ತರು ಇದ್ದಾರೆ. ಅದರ ನಡುವೆ ನಮ್ಮ ಹಿರಿಯರು ನಮ್ಮತನವನ್ನು ಉಳಿಸಿದ್ದಾರೆ. ಸ್ವಾತಂತ್ರ ಹೋರಾಟದ ಮೊದಲು ಕಿಚ್ಚು ಹಚ್ವಿದ್ದೆ ಕರ್ನಾಟಕ. ನೂರು ವರ್ಷಗಳ ಹಿಂದೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಹತ್ಮಾ ಗಾಂಧಿ ಕರ್ನಾಟಕದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ರು ಎಂದರು.


Spread the love

LEAVE A REPLY

Please enter your comment!
Please enter your name here