HomeSports NewsIPL 2025: ಕರುಣ್ ನಾಯರ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು: ಕನ್ನಡಿಗನನ್ನು ಹೊಗಳಿದ ಹಾರ್ದಿಕ್ ಪಾಂಡ್ಯ

IPL 2025: ಕರುಣ್ ನಾಯರ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು: ಕನ್ನಡಿಗನನ್ನು ಹೊಗಳಿದ ಹಾರ್ದಿಕ್ ಪಾಂಡ್ಯ

For Dai;y Updates Join Our whatsapp Group

Spread the love

ಕರುಣ್ ನಾಯರ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು ಎಂದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಕನ್ನಡಿಗನನ್ನು ಹಾಡಿ ಹೊಗಳಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ನಿನ್ನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಸೋಲನ್ನು ಕಂಡಿದ್ದು, ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 205 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 19 ಓವರ್​ಗಳಲ್ಲಿ 193 ರನ್​ಗಳಿಸಿ ಆಲೌಟ್ ಆಗಿದೆ.

ಗೆಲುವಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ತಂಡದ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದರು. ಗೆಲುವು ಯಾವಾಗಲೂ ವಿಶೇಷ, ವಿಶೇಷವಾಗಿ ಈ ರೀತಿಯ ಗೆಲುವುಗಳು ತುಂಬಾ ಖುಷಿ ನೀಡುತ್ತದೆ. ಏಕೆಂದರೆ ಒಂದು ಹಂತದಲ್ಲಿ ನಾವು ಪಂದ್ಯವನ್ನು ಕಳೆದುಕೊಂಡಿದ್ದೆವೆ.

ಕರುಣ್ ನಾಯರ್ ಬ್ಯಾಟಿಂಗ್ ಮಾಡಿದ ರೀತಿ ಅದ್ಭುತವಾಗಿತ್ತು. ಅವರ ಸಿಡಿಲಬ್ಬರದಿಂದಾಗಿ ಪಂದ್ಯವೇ ಕೈ ತಪ್ಪಿ ಹೋಯಿತು ಎಂದೇ ಭಾವಿಸಿದ್ದೆ. ಅಂತಹದೊಂದು ಇನಿಂಗ್ಸ್ ಅವರು ಆಡಿದ್ದರು ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

ಇದಾಗ್ಯೂ ಕರ್ಣ್ ಶರ್ಮಾ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಬೌಂಡರಿ ಲೈನ್​ಗಳು ಕೇವಲ 60 ಮೀಟರ್​ ಉದ್ದವಿರುವಾಗ ಕೆಲ ಎಸೆತಗಳನ್ನು ಎಸೆಯಲು ದೈರ್ಯ ಬೇಕಿರುತ್ತದೆ. ಅದನ್ನು ಕರ್ಣ್ ಶರ್ಮಾ ಮಾಡಿ ತೋರಿಸಿದರು. ಇದರಿಂದಾಗಿ ನಾವು ಕಂಬ್ಯಾಕ್ ಮಾಡಲು ಸಾಧ್ಯವಾಯಿತು ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!