ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕಸ್ತೂರ ಬಾ ನಗರದಲ್ಲಿ ಬಾವಿಗೆ ಬಿದ್ದಿದ್ದ ಎರಡು ವರ್ಷದ ಬಾಲೆ ಭುವಿ ಪವಾಡ ಸದೃಶವಾಗಿ ಬದುಕುಳಿದ ಘಟನೆ ನಡೆದಿದೆ.
ಆಟವಾಡುತ್ತಿದ್ದ ವೇಳೆ ಏಕಾಏಕಿ ನಾಪತ್ತೆಯಾಗಿದ್ದ ಭುವಿಯನ್ನು ಮನೆಯವರು ಸುತ್ತಮುತ್ತ ಹುಡುಕಿದರೂ ಕಂಡುಹಿಡಿಯಲಾಗಲಿಲ್ಲ. ನಂತರ ಮನೆಯ ಮುಂದೆ ಇರುವ ಬಾವಿಯಲ್ಲಿ ಅಳುವ ಶಬ್ದವನ್ನು ಕೇಳಿದ ಕುಟುಂಬದವರು ತಕ್ಷಣ ಪರಿಶೀಲನೆ ನಡೆಸಿದಾಗ, ಮಗು ಬಾವಿಯ ಒಳಗಿನ ಪೈಪಿನಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ.
ತಕ್ಷಣವೇ ಪಯ್ಯ ಚವಟಿ ಎಂಬ ವ್ಯಕ್ತಿ ಬಾವಿಗೆ ಇಳಿದು ಮಗುವನ್ನ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.



