ಮೈಸೂರು:– ಮೈಸೂರಿನ ಹೃದಯಭಾಗದಲ್ಲಿರುವ ಸರಸ್ವತಿಪುರಂನಲ್ಲಿ ತಳ್ಳುವ ಗಾಡಿಯಲ್ಲಿ ತರಕಾರಿ ಮಾರುತ್ತಿದ್ದ ತಿಮ್ಮೇಗೌಡ ಎಂಬುವವರ ತಳ್ಳುವ ಗಾಡಿಯನ್ನು ಕಳ್ಳತನ ಮಾಡಲಾಗಿದೆ.
ಪ್ರತಿದಿನವೂ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಿ ಜೀವನ ಮಾಡುತ್ತಿದ್ದ ತಿಮ್ಮೇಗೌಡ ಅವರ ಕುಟುಂಬ ಈಗ ಸಂಕಷ್ಟಕ್ಕೆ ಸಿಲುಕಿದೆ. ‘ಸಾಲ ಸೋಲ ಮಾಡಿ ಒಂದು ತಳ್ಳುವ ಗಾಡಿ ಖರೀದಿ ಮಾಡಿ ಅದರಲ್ಲಿ ಈರುಳ್ಳಿ ತರಕಾರಿ ಮಾರಿ ಜೀವನ ನಡೆಸುತ್ತಿದ್ದರು. ಪ್ರತಿದಿನ ಸರಸ್ವತಿಪುರಂ ಬಡಾವಣೆಯ ಜವರೇಗೌಡ ಪಾರ್ಕ್ ಬಳಿ ವ್ಯಾಪಾರ ಮಾಡುತ್ತಿದ್ದರು. ಕಳೆದ ಸೋಮವಾರ ಸಹ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಮಳೆ ಶುರುವಾದ ಕಾರಣ ವ್ಯಾಪಾರ ನಿಲ್ಲಿಸಿ ತರಕಾರಿ ಗಾಡಿಗೆ ಟಾರ್ಪಲ್ ಹೊದಿಸಿ ಮನೆಗೆ ಊಟಕ್ಕೆ ಹೋಗಿದ್ದರು.
ಈ ವೇಳೆ ಅಲ್ಲಿಗೆ ಬಂದ ಬೈಕ್ ಸವಾರ, ಆ ಗಾಡಿಯನ್ನು ತನ್ನ ಬೈಕ್ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿದ್ದಾನೆ. ಇದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಈ ಸಂಬಂಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.