ಖಾನಾಪುರ ಸಿಪಿಐ ಅಮಾನತು: ಯಾವುದೇ ಕಾರಣಕ್ಕೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ – ಜಿ ಪರಮೇಶ್ವರ್

0
Spread the love

ಬೆಳಗಾವಿ: ವಿಧಾನ ಪರಿಷತ್​ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿದ್ದಾರೆ. ಇನ್ನೂ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಜಿ ಪರಮೇಶ್ವರ್​, ಖಾನಾಪುರ ಸಿಪಿ​ಐ ಅಮಾನತು ಇಲಾಖೆ ಅಧಿಕಾರಿಗಳ ನಿರ್ಧಾರವಾಗಿದೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದರು.

Advertisement

ಇನ್ನೂ ಬೆಳಗಾವಿ ಪೊಲೀಸ್​ ಆಯುಕ್ತರ ​ಕಚೇರಿಯಲ್ಲಿ ನಡೆದ ಸಭೆ ಕುರಿತು ಪ್ರತಿಕ್ರಿಯೇ ನೀಡಿದ ಅವರು, ಸಭೆಯಲ್ಲಿ ಸಿ.ಟಿ.ರವಿ ಪ್ರಕರಣದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ತನಿಖಾ ಹಂತದಲ್ಲಿ ಇರುವಾಗ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here