ಕಲಬುರ್ಗಿ:- ಕರ್ನಾಟಕದಲ್ಲಿ ಪವರ್ ಶೇರಿಂಗ್ ಚರ್ಚೆ ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ DCM ಡಿಕೆಶಿ, ಸಿದ್ದರಾಮಯ್ಯಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
Advertisement
ಸೀಟ್ ಫೈಟ್ ತೀವ್ರಗೊಂಡಿರುವ ಹೊತ್ತಲ್ಲೇ ಸಿಎಂ-ಡಿಸಿಎಂಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂದೇಶ ಎಲ್ಲರ ಗಮನ ಸೆಳೆದಿದೆ.
ಸಿದ್ದರಾಮಯ್ಯ ಒಳ್ಳೆ ಬಜೆಟ್ ಕೊಟ್ಟಿದ್ದಾರೆ. ಡಿಕೆಶಿ ಕೂಡ ಪಕ್ಷ, ಸಂಘಟನೆ ಅಂತಾ ಒಳ್ಳೆ ಕೆಲಸ ಮಾಡಿದ್ದಾರೆ. ಹೀಗಾಗಿ ಇಬ್ರು ಒಟ್ಟಾಗಿ ಹೋಗ್ಬೇಕು. ಅಭಿವೃದ್ಧಿ ವಿಚಾರ ಬಿಟ್ಟು ಬೇರೆ ಮಾತಾಡಬಾರದು. ನೀವು ಪರಸ್ಪರ ವಿರುದ್ಧ ಹೋದ್ರೆ ಕಷ್ಟ ಆಗುತ್ತೆ ಎಂದು ಕೈಸನ್ನೇ ಮಾಡುತ್ತಾ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ.