ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪೀಣ್ಯದ ಸುವರ್ಣ ನಗರ ಬಸ್ ನಿಲ್ದಾಣದ ಬಳಿ ಸಿನಿಮೀಯ ರೀತಿಯಲ್ಲಿ ಮಹಿಳೆಯ ಕಿಡ್ನ್ಯಾಪ್ ಮಾಡಿರುವ ಘಟನೆ ಜರುಗಿದೆ.
ಘಟನೆ ಕಣ್ಣಾರೆ ಕಂಡ ಸತ್ಯಜಿತ್ ಚೌದರಿ ಎಂಬ ಯುವಕ ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ರಾತ್ರಿ ತನ್ನ ತಾಯಿಯ ಜೊತೆ ವಾಸವಾಗಿದ್ದ ಪಿಜಿಯಲ್ಲಿ ಫೋನ್ನಲ್ಲಿ ಮಾತನಾಡುವಾಗ ಘಟನೆ ನಡೆದಿದೆ. 32 ವರ್ಷ ವಯಸ್ಸಿನ ಮಹಿಳೆ ಫೋನ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದಾಗ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಹೇಳಿದ್ದಾರೆ.
ಹಳದಿ ಬಣ್ಣದ ನಂಬರ್ ಪ್ಲೇಟ್ ಇಲ್ಲದ ಟಿಂಟೆಡ್ ಗ್ಲಾಸ್ ಕಾರ್ನಲ್ಲಿ ಬಂದು ದುಷ್ಕೃತ್ಯ ಎಸಗಲಾಗಿದೆ. ಕಪ್ಪು ಬಣ್ಣದ ಜಾಕೆಟ್ ಧರಿಸಿ, ಮಹಿಳೆಯ ಮುಖಕ್ಕೆ ಹಿಂಭಾಗದಿಂದ ವ್ಯಕ್ತಿ ಓರ್ವ ಬಟ್ಟೆಯಿಂದ ಅದುಮಿದ.
ಮಹಿಳೆಯನ್ನು 6 ಜನ ವ್ಯಕ್ತಿಗಳು ಎತ್ತಿಕೊಂಡು ಕಾರ್ನ ಎಡಭಾಗದ ಡೋರ್ ತೆಗೆದು ಒಳಗೆ ಹಾಕಿಕೊಂಡು ಪರಾರಿ ಆಗಿದ್ದಾರೆ ಎಂದು ಯುವಕ ತಿಳಿಸಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೀಣ್ಯಾ ಪೊಲೀಸರು ಆರು ದಿನದಿಂದ ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.