101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ: ಹೆಚ್ ಸಿ ಮಹದೇವಪ್ಪ

0
Spread the love

ಬೆಂಗಳೂರು: 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ ​ಸಿ ಮಹದೇವಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳ ಜನಸಂಖ್ಯೆ ತಿಳಿಯಲು ಒಳಮೀಸಲಾತಿ ಜಾರಿಗೆ ಗಣತಿ ಮಾಡುತ್ತಿದ್ದೇವೆ.

Advertisement

ಗಣತಿ ಕಾರ್ಯಕ್ಕೆ ಅಂದಾಜು 100 ಕೋಟಿ ರೂ ಹಣ ಖರ್ಚು ಆಗಲಿದೆ ಎಂದು ತಿಳಿಸಿದ್ದಾರೆ.ಇದು ಎಸ್​​ಸಿ ಅವರಿಗೆ ಮಾತ್ರ ಈ ಸಮೀಕ್ಷೆ. ಇದು ಎಂಪರಿಕಲ್ ಡಾಟಾ ಕಲೆಕ್ಟ್ ಮಾಡುವುದು ಅಷ್ಟೇ. ಈ ಸಮೀಕ್ಷೆಗೆ ಎಡಗೈ ಮತ್ತು ಬಲಗೈನವರ ಒಮ್ಮತ ಇದೆ.

ಯಾರು ಕೂಡ ಸುಳ್ಳು ಹೇಳೋಕೆ‌ ಆಗಲ್ಲ, ಕಾಂತರಾಜು ವರದಿಯಲ್ಲಿ, ನ್ಯಾಷನಲ್ ಸಮೀಕ್ಷೆಯಲ್ಲಿ ಅಂಕಿ-ಅಂಶ ಇಲ್ಲ. ಹೀಗಾಗಿ ಯಾರು ಕೂಡ ಅನುಮಾನ ಪಡುವ ಹಾಗಿಲ್ಲ. ಯಾರು, ಎಷ್ಟು ಜನ ಇದ್ದಾರೆ ಅಂತಾ ಯಾರಿಗೂ ಸಹ ಗೊತ್ತಿಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here