ಮಂಡ್ಯ: ನಾಲೆಯಲ್ಲಿ ಬಾಲಕ ಕೊಚ್ಚಿಯೋದ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಗಂಟೆ ಬಳಿಕ ಬಾಲಕನ ಮೃತದೇಹ ಪತ್ತೆಯಾಘಿರುವ ಘಟನೆ ಮಂಡ್ಯ ತಾಲೂಕಿನ ಹೊನಗಾನಹಳ್ಳಿ ಮಠ ಗ್ರಾಮದಲ್ಲಿ ನಡೆದಿದೆ. ಸಬಿನ್ ರಾಜ್ (4) ಮೃತ ಬಾಲಕನಾಗಿದ್ದು, ನೆನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಾಲೆಯಲ್ಲಿ ಕೊಚ್ಟಿಹೋಗಿದ್ದನು.
Advertisement
ಸಂಜೆಯಿಂದ ರಾತ್ರಿ 9 ಗಂಟೆಯವರೆಗೂ ಅಗ್ನಿ ಶಾಮಕದಳ ಬಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿ ಇಂದು ಮತ್ತೆ ಶೋಧ ನಡೆಸಲು ನಿರ್ಧರಿಸಲಾಗಿತ್ತು. ಆದ್ರೆ ನಾಲೆಯಲ್ಲಿ ಸಂಪೂರ್ಣ ನೀರು ನಿಲ್ಲಿಸಿದ್ರಿಂದ ಮೃತದೇಹ ಪತ್ತೆಯಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.