Wayanad Landslides: ವಯನಾಡಿನ ಗುಡ್ಡ ಕುಸಿತಕ್ಕೆ ಕೊಡಗಿನ ಬಾಲಕ ಬಲಿ..!

0
Spread the love

ಕೊಡಗು: ಕೇರಳದ ವಯನಾಡಿನಲ್ಲಿ ನಡೆದ ಗುಡ್ಡ ಕುಸಿತದುರಂತವೂ ಅನೇಕ ಬದುಕುಗಳನ್ನ ಕಸಿದುಕೊಂಡಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಲಕ ಗುಡ್ಡ ಕುಸಿತಕ್ಕೆ ಬಲಿಯಾಗಿದ್ದಾನೆ. ಗುಹ್ಯ ಗ್ರಾಮದ ರೋಹಿತ್(9) ಮೃತ ಬಾಲಕ. ಪಳ್ಳಕ್ಕರೆ ಗೇಟ್ ಸಮೀಪದ ಖಾಸಗಿ ತೋಟದ ಲೈನ್ ಮನೆಯಲ್ಲಿ ರವಿ ಹಾಗೂ ಕವಿತಾ ದಂಪತಿ ತನ್ನ ಮೂವರು ಗಂಡು ಮಕ್ಕಳೊಂದಿಗೆ ವಾಸವಾಗಿದ್ದರು.

Advertisement

ಒಂದು ತಿಂಗಳ ಹಿಂದೆ ಕವಿತಾ ತನ್ನ ಕಿರಿಯ ಮಗ ರೋಹಿತ್ ಜೊತೆ ವಯನಾಡುವಿನ ಮೆಪ್ಪಾಡಿಯಲ್ಲಿರುವ ಅಕ್ಕನ ಮನೆಗೆ ತೆರಳಿದ್ದರು. ನಂತರ ರೋಹಿತ್‌ನನ್ನು ಅಕ್ಕನ ಮನೆಯಲ್ಲೇ ಬಿಟ್ಟು ಕ್ಯಾಲಿಕಟ್‌ನಲ್ಲಿರುವ ಮನೆಯೊಂದರ ಕೆಲಸಕ್ಕೆ ಕವಿತಾ ಹೋಗಿದ್ದರು. ವಯನಾಡು ಜಲ ಪ್ರಳಯದಲ್ಲಿ ರೋಹಿತ್ ಈಗ ಜೀವ ಕಳೆದುಕೊಂಡಿದ್ದಾನೆ. ಇನ್ನೂ ವಯನಾಡಿನ ಗುಡ್ಡ ಕುಸಿತ ಪ್ರಕರಣದಲ್ಲಿ ಮೈಸೂರಿನ ಟಿ.ನರಸೀಪುರದ ಮೂವರು ಮೃತಪಟ್ಟಿದ್ದು 9 ಮಂದಿ ನಾಪತ್ತೆಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here