ಕೋಲಾರ:- 20 ಸಾವಿರ ಲಂಚ ಪಡೆಯುವಾಗ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಎಸಿ ಕಚೇರಿಯಲ್ಲಿ ಜರುಗಿದೆ.
ಗ್ರಾಮ ಲೆಕ್ಕಾಧಿಕಾರಿ ಕೋಮಲ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಕೋಮಲ ಎಂಬುವವರು, ಉತ್ತನೂರು ಗ್ರಾಮದ ರೈತ ಸುರೇಶ್ ಎಂಬುವರ ಬಳಿ ಪೌತಿ ಖಾತೆ ಮಾಡಿಸಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮುಂಗಡವಾಗಿ 20 ಸಾವಿರ ಲಂಚ ಪಡೆಯುವ ವೇಳೆ ಹಣದ ಸಮೇತ ಕೋಮಲ ಸಿಕ್ಕಿಬಿದ್ದಿದ್ದಾರೆ.
ಕೋಲಾರ ಲೋಕಾಯುಕ್ತ ಇನ್ಸ್ಪೆಕ್ಟರ್ ರೇಣುಕ ಮತ್ತು ಸಿಬ್ಬಂದಿ ನಡೆಸಿದ ದಾಳಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಕೋಮಲ ಅವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಕೈಗೊಳ್ಳಲಾಗಿದೆ.
ಇನ್ನೂ ಎಸಿ ಡಾ ಮೈತ್ರಿ ಬಂದ ಮೇಲೆ ಲಂಚಾವತಾರದ ಬಗ್ಗೆ ಜಿಲ್ಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ವಕೀಲರು ಲಕ್ಷ-ಲಕ್ಷ ಲಂಚದ ಬಗ್ಗೆ ಆರೋಪ ಮಾಡಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದಿರೋದು ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಪ್ರಶ್ನೆ ಮಾಡುವಂತೆ ಮಾಡಿದೆ.