ಕೆಎಸ್ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಯುವಕರು ದುರ್ಮರಣ

0
Spread the love

ಹಾಸನ:- ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಕೆಎಸ್ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ಇರ್ಫಾನ್(25), ತರುಣ್(26) ಮತ್ತು ರೇವಂತ್(27) ಮೃತ ಯುವಕರು. ಇವರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು ಎನ್ನಲಾಗುತ್ತಿದೆ. ಕೆಎಸ್​​​ಆರ್​​ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಮೈಸೂರು ಕಡೆಯಿಂದ ಒಂದೇ ದ್ವಿಚಕ್ರ ವಾಹನದಲ್ಲಿ ಮೂವರು ಯುವಕರು ಬರುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ.

ಇನ್ನು ಡಿಕ್ಕಿ ರಭಸಕ್ಕೆ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here