ನಿಂತಿದ್ದ ಕ್ಯಾಂಟರ್‌ʼಗೆ KSRTC ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ -ಬಸ್ ಚಾಲಕನ ಸ್ಥಿತಿ ಗಂಭೀರ

0
Spread the love

ರಾಮನಗರ: ಕ್ಯಾಂಟರ್‌ʼಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‍ʼನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ.

Advertisement

ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ.

ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here