ಕಂದಕಕ್ಕೆ ಉರಳಿದ KSRTC ಬಸ್: ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಸೇಫ್

0
Spread the love

ಬೀದರ್: ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ಉರುಳಿ ಬಿದ್ದ ಘಟನೆ ಜರುಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Advertisement

ಭಾಲ್ಕಿಯಿಂದ ಕಮಲನಗರ ಕಡೆ ಹೋಗುತ್ತಿದ್ದಾಗ ವೇಗವಾಗಿ ಎದುರುಗಡೆಯಿಂದ ಮತ್ತೊಂದು ಸಾರಿಗೆ ಬಸ್ ಬಂದಿದೆ. ಈ ವೇಳೆ ಆಗುತ್ತಿದ್ದ ಅಪಘಾತ ತಪ್ಪಿಸಿಲು ಹೋಗಿ ಬಸ್ ಕಂದಕಕ್ಕೆ ಬಿದ್ದಿದೆ. ಹೆದ್ದಾರಿ ದುರಸ್ತಿ ಕಾಮಗಾರಿ ನಡೆಯುತ್ತಿರುವ ಕಾರಣ ವಾಹನಗಳು ಒನ್ ವೇ ಸಂಚಾರ ಮಾಡುತ್ತಿವೆ.

ಈ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ತೆಲಂಗಾಣ ಬಸ್‌ನಿಂದಾಗಿ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಂದಕಕ್ಕೆ ಬಿದ್ದಿದೆ. ಬಸ್ಸಿನಲ್ಲಿ 10 ರಿಂದ 15 ಜನ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಚಾಲಕ ಮತ್ತು ನಿರ್ವಾಹಕ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here