ಕಂದಕಕ್ಕೆ ಉರುಳಿದ KSRTC ಬಸ್..! ಕೂದಲೆಳೆಯ ಅಂತರದಲ್ಲಿ ಪಾರಾದ ಪ್ರಯಾಣಿಕರು

0
Spread the love

ಬೆಳಗಾವಿ: ಸ್ಟೆರಿಂಗ್ ರಾಡ್ ಕಟ್ ಆಗಿ KSRTC ಬಸ್ ಕಂದಕಕ್ಕೆ ಉರುಳಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಸತ್ತಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅದೃಷ್ಟವಶಾತ್ ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ.

Advertisement

ಈ ಬಸ್, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಡಿಪೋಗೆ ಸೇರಿದೆ. ಸತ್ತಿ ಗ್ರಾಮದಿಂದ ಅಥಣಿ ಕಡೆಗೆ ಬರುತ್ತಿದ್ದಂತೆ ಏಕಾಏಕಿ ಸ್ಟೇರಿಂಗ್ ರಾಡ್ ಕಟ್ ಆಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಸ್ ಉರುಳಿದೆ. ಚಾಲಕನ ಸಮಯಪ್ರಜ್ಞೆಗೆ ಪ್ರಯಾಣಿಕರು ಸೇಫ್ ಆಗಿದ್ದು, ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love

LEAVE A REPLY

Please enter your comment!
Please enter your name here