ಮರಕ್ಕೆ ಡಿಕ್ಕಿ ಹೊಡೆದ KSRTC ಬಸ್: ತಪ್ಪಿದ ದುರಂತ, ಸ್ವಲ್ಪದರಲ್ಲೇ ಪಾರಾದ ಪ್ರಯಾಣಿಕರು!

0
Spread the love

ಕೊಡಗು:- KSRTC ಬಸ್ ಮರಕ್ಕೆ ಡಿಕ್ಕಿ ಹೊಡೆದು ಸ್ವಲ್ಪದರಲ್ಲೇ ಪ್ರಯಾಣಿಕರು ಪಾರಾಗಿರುವ ಘಟನೆ ಕೊಡಗಿನಲ್ಲಿ ಜರುಗಿದೆ.

Advertisement

ಗುಂಡಿಯನ್ನು ತಪ್ಪಿಸಲು ಹೋದ KSRTC ಚಾಲಕ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

KSRTC ಬಸ್ ಮೈಸೂರಿನಿಂದ ವಿರಾಜಪೇಟೆ ಕಡೆಗೆ ಹೋಗುತ್ತಾ ಇತ್ತು. ತಿತಿಮತಿ ಸಮೀಪದ ದೇವರಪುರದಲ್ಲಿ ಈ ಭೀಕರ ಬಸ್ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಸಂಪೂರ್ಣ ಜಖಂ ಆಗಿದೆ. ಬಸ್ ಚಾಲಕನ ಕಾಲು ಮುರಿದಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here