HomeKarnataka Newsಪಾಟಾ ಕಟ್ ಆಗಿ‌ ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ...

ಪಾಟಾ ಕಟ್ ಆಗಿ‌ ಚಾಲಕನ ನಿಯಂತ್ರಣ ತಪ್ಪಿದ KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

For Dai;y Updates Join Our whatsapp Group

Spread the love

ಕೊಪ್ಪಳ: ಬಸ್ ನ ಪಾಟಾ ತುಂಡಾದ ಹಿನ್ನೆಲೆ, ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ‌ ಪಕ್ಕದ ಜಮೀನಿಗೆ ಉರುಳಿ, ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಹೈದರ್ ನಗರ‌ ಸಮೀಪ ನಡೆದಿದೆ.

ಇಂದು ಬೆಳಿಗ್ಗೆ ಕೊಪ್ಪಳ ತಾಲೂಕಿನ ಕೆಸಲಾಪುರ ಗ್ರಾಮದಿಂದ ಹೊರಟಿದ್ದ ಬಸ್, ಹೈದರ್ ನಗರ, ಹಟ್ಟಿ ಗ್ರಾಮ, ಹಾಗೂ ಅಳವಂಡಿ ಗ್ರಾಮದ ಮಾರ್ಗವಾಗಿ ಕೊಪ್ಪಳಕ್ಕೆ ತೆರಳಬೇಕಿತ್ತು. ಆದರೆ ಬಸ್ ನ ಪಾಟಾ ತುಂಡಾದ ಹಿನ್ನೆಲೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಹೈದರ್ ನಗರ ಸಮೀಪ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಗಾಯಗಳಾಗಿವೆ.

ಶಾಲಾ‌ ಸಮಯ ಆಗಿದ್ದರಿಂದ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದು, ಈ ವೇಳೆ‌ ವಿದ್ಯಾರ್ಥಿಗಳ ತಲೆ, ಹಾಗೂ ಕೈ ಕಾಲುಗಳಿಗೆ ಪೆಟ್ಟಾಗಿ ಗಾಯಗಳಾಗಿವೆ‌. ಸದ್ಯ ಗಾಯಾಳುಗಳನ್ನ ಅಂಬ್ಯುಲೆನ್ಸ್ ಮೂಲಕ ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆ ಹಾಗೂ ಅಳವಂಡಿ‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು,ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಹೈದರ್ ನಗರ‌ ಹಾಗೂ ಹಟ್ಟಿ ಗ್ರಾಮದ ಮಧ್ಯೆ ಬಹಳಷ್ಟು ದಿನಗಳಿಂದ ರಸ್ತೆ ಕಾಮಗಾರಿ ನಡೆಯುತ್ತಿದ್ದು,‌ ಸಂಚಾರಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ.‌ ನಿಧಾನಗತಿಯಲ್ಲಿ ಕಾಮಗಾರಿ ನಡೆದಿದೆ. ಅಲ್ಲದೇ ರಸ್ತೆಯನ್ನ ಸಂಪೂರ್ಣವಾಗಿ ಅಗೆಯಲಾಗಿದ್ದು, ಈ ರೀತಿಯ ಅಪಘಾತಗಳಿಗೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷವೇ‌ ಕಾರಣ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!