ಚಾಮರಾಜನಗರ:-ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಬಳಿ ಜರುಗಿದೆ.
Advertisement
ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಾಜ್ಯದ ನಾನಾ ಕಡೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ದೇವರ ದರ್ಶನ ಪಡೆದು ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೇಶ್ವರಬೆಟ್ಟ ಮಾರ್ಗ ಸಮೀಪ ಈ ಅವಘಡ ಸಂಭವಿಸಿದೆ. ತಕ್ಷಣ ದಾರಿ ಹೋಕರು ತುರ್ತು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಘಟನೆ ನಡೆದ ಹಲವು ಅರ್ಧ ತಾಸುಗಳು ಆ್ಯಂಬುಲೆನ್ಸ್ ಸಿಗದೇ ಪರದಾಡಿದ್ದಾರೆ.
ಬಳಿಕ ಪ್ರಾಧಿಕಾರದ ಆ್ಯಂಬುಲೆನ್ಸ್ ಸೇರಿ ಖಾಸಗಿ ವಾಹನದ ಮುಖಾಂತರ ಕೊಳ್ಳೇಗಾಲ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.