ಬೆಂಗಳೂರು: ಮುಸಲ್ಮಾನರ ವೋಟು ಕೇಳುವ ಹಕ್ಕನ್ನು ಕುಮಾರಸ್ವಾಮಿ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮುಸ್ಲಿಂ ಮತಗಳು ಕೈ ಕೊಟ್ಟ ಕಾರಣ ಚನ್ನಪಟ್ಟಣದಲ್ಲಿ ಸೋಲು ಎಂಬ ನಿಖಿಲ್ ಹೇಳಿಕೆ ವಿಚಾರವಾಗಿ ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಗೆ ಪಾಪ ಆ ಜನ ಮತ ಹಾಕಿದ್ದರು.
ಇವಾಗ ಬಿಜೆಪಿ ಜೊತೆಗೆ ಹೋಗಿರುವಾಗ ಯಾಕೆ ಮತ ಹಾಕ್ತಾರೆ? ಅವರು ಮುಸ್ಲಿಮರನ್ನು ನಂಬಿಲ್ಲ. ಅವರಿಗೆ ಸೀಟ್ ಕೊಟ್ರಾ? ಮಂತ್ರಿ ಮಾಡಿದ್ರಾ? 4% ಮೀಸಲಾತಿ ಕಿತ್ತು ಹಾಕಿದ್ದಾರೆ. ಅವರ ಬಳಿ ಮತ ಕೇಳುವ ಹಕ್ಕು ಅವರಿಗೆ ಇಲ್ಲ. ಈ ಬಗ್ಗೆ ನಿಖಿಲ್ ಅಲ್ಲ, ಇದರ ಬಗ್ಗೆ ದೇವೇಗೌಡರು ಮಾತನಾಡಬೇಕು ಎಂದಿದ್ದಾರೆ.
ಇನ್ನೂ ಮುಡಾ ವಿಚಾರದಲ್ಲಿ ಐಎಎಸ್ ಅಧಿಕಾರಿಯೊಬ್ಬರು 144 ಫೈಲ್ ತಗೆದುಕೊಂಡು ಹೋಗಿದಾರೆ ಎಂಬ ವಿಚಾರವಾಗಿ, ಅದು ನನ್ನ ಗಮನಕ್ಕೆ ಬಂದಿಲ್ಲ. ಅದು ಹೇಗೆ ತಗೆದುಕೊಂಡು ಹೋಗ್ತಾರೆ? ಸರ್ಕಾರಿ ದಾಖಲೆ ಅದು, ಅದೆಲ್ಲಾ ಹೇಗೆ ತಗೆದುಕೊಂಡು ಹೋಗೋಕೆ ಸಾಧ್ಯ? ಲೋಕಾಯುಕ್ತ ವರದಿ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.