ಅಧಿಕಾರ ದುರ್ಬಳಕೆ ಮಾಡಿರುವುದು ಕುಮಾರಸ್ವಾಮಿಯವರು, ಸರ್ಕಾರವಲ್ಲ: HDK ವಿರುದ್ಧ ಚೆಲುವರಾಯಸ್ವಾಮಿ ಕಿಡಿ

0
Spread the love

ಬೆಂಗಳೂರು: ಅಧಿಕಾರ ದುರ್ಬಳಕೆ ಮಾಡಿರುವುದು ಕುಮಾರಸ್ವಾಮಿಯವರು, ಸರ್ಕಾರವಲ್ಲ ಎಂದು ಸಚಿವ ಚೆಲುವರಾಯಸ್ವಾಮಿ HDK ವಿರುದ್ಧ ಕಿಡಿಕಾರಿದ್ದಾರೆ. ಬೆಮಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕೇತಗಾನಹಳ್ಳಿ ಜಮೀನು ಸರ್ವೇ ಕೋರ್ಟ್ ಆದೇಶದ ಮೇರೆಗೆ ನಡೆಯುತ್ತಿದೆ.

Advertisement

ಸರ್ಕಾರ ಉದ್ದೇಶಪೂರ್ವಕವಾಗಿ ಮಾಡ್ತಿರೋದಲ್ಲ. ಅಧಿಕಾರ ದುರ್ಬಳಕೆ ಮಾಡಿರುವುದು ಕುಮಾರಸ್ವಾಮಿಯವರು, ಸರ್ಕಾರವಲ್ಲ. ಜಮೀನು ಸರ್ವೇ ಸರ್ಕಾರ ಮಾಡುತ್ತಿಲ್ಲ. ಕೋರ್ಟ್ ನಿರ್ದೇಶನದ ಮೇಲೆ ಆಗುತ್ತಿದೆ. ಹಾಗಾದ್ರೆ ಕೋರ್ಟ್ ಸರ್ವೇ ಮಾಡಿ ಎಂದು ಹೇಳಿರುವುದು ರಾಜಕೀಯನಾ? ಎಂದು ಪ್ರಶ್ನೆ ಮಾಡಿದರು.

ನಾವೆಲ್ಲರು ಸಂವಿಧಾನ, ನ್ಯಾಯಾಲಯದಲ್ಲಿ ಭರವಸೆ ಇಟ್ಟುಕೊಂಡು ಕೆಲಸ ಮಾಡ್ತಿದ್ದೇವೆ. ಈ ಸರ್ವೇ ಸರ್ಕಾರ ಮಾಡಿದ್ದಲ್ಲ. ನ್ಯಾಯಾಲಯದ ಸೂಚನೆ ಮೇಲೆ ಆಗ್ತಿರೋದು. ಕುಮಾರಸ್ವಾಮಿ ಅವರು ಈ ರೀತಿ ಮಾತನಾಡಿದರೆ ಅದು ದುರಂತ. ಅವರು ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಹೇಳುತ್ತಲೇ ಇದ್ದಾರೆ. ದಾಖಲಾತಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here