ಇಂದಿನಿಂದ ಕರ್ನಾಟಕದ ಕುಂಭಮೇಳ ಶುರು: ನರಸೀಪುರದಲ್ಲಿ ಜನವೋ ಜನ!

0
Spread the love

ಮೈಸೂರು:- ಇಂದಿನಿಂದ ಕರ್ನಾಟಕದ ಕುಂಭಮೇಳ ಶುರುವಾಗಿದ್ದು, ನರಸೀಪುರದಲ್ಲಿ ಜನಜಂಗುಳಿ ಜೋರಾಗಿದೆ.

Advertisement

ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ 3 ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಸಾವಿರಾರು ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ಪವಿತ್ರ ಸ್ನಾನ ನಡೆಯುತ್ತಿದ್ದರೆ, ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಟಿ.ನರಸೀಪುರದ ತ್ರಿವೇಣಿ ಸಂಗಮ ಹೆಸರುವಾಸಿಯಾಗಿದೆ.

ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆಯವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.

ಇನ್ನು ಇಂದು ಬೆಳಗ್ಗೆ 10 ಗಂಟೆಗೆ ಅಗಸ್ತೇಶ್ವರ ದೇವಸ್ಥಾನದಲ್ಲಿ ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.


Spread the love

LEAVE A REPLY

Please enter your comment!
Please enter your name here