ಕುರುಗೋಡು: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ!

0
Spread the love

ಕುರುಗೋಡು:-ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ಜರುಗಿದೆ. 29 ವರ್ಷದ ತಾಯಿ ಸಿದ್ದವ್ವ, ಮಕ್ಕಳಾದ 7 ವರ್ಷದ ಅಭಿಜ್ಞಾ, 5 ವರ್ಷದ ಅವನಿ ಮತ್ತು 3 ವರ್ಷದ ಆರಾಧ್ಯ ಮೃತರು.

Advertisement

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಹೊಸೂರ್ ಚಂಪಾ ಗ್ರಾಮದ ಈ ಕುರಿಗಾಹಿ ಕುಟುಂಬ ಕುರಿಗಳೊಂದಿಗೆ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ಹಲವು ದಿನಗಳಿಂದ ಬೀಡುಬಿಟ್ಟಿತ್ತು. ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ತಾಯಿ ಮತ್ತು ಮೂವರು ಮಕ್ಕಳು ಕುರಿಗಳನ್ನು ಬಿಟ್ಟು ಕಾಣೆಯಾಗಿದ್ದರು. ಬುಧವಾರ ಬೆಳಗ್ಗೆ ಕೃಷಿಹೊಂಡದ ಬಳಿ ಹೋಗಿ ನೋಡಿದಾಗ ಮೃತದೇಹಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ಹೊಸೂರ್ ಗ್ರಾಮದ ಸಿದ್ದವ್ವ ಅವರನ್ನು ಅದೇ ಗ್ರಾಮದ ಸಂಜಯ್ ಎಂಬುವವರಿಗೆ ಕೊಟ್ಟು 10 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ಗಂಡನ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಮೃತಳ ತಾಯಿ ರೇಣುಕಾ ದೂರು ನೀಡಿದ್ದು, ಸಂಜಯ್ (32)ನನ್ನು ಕುರುಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here