ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಗದಗ ಮತಕ್ಷೇತ್ರದ ಮಲ್ಲಸಮುದ್ರ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯದ ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

Advertisement

ಮಲ್ಲಸಮುದ್ರ ಗ್ರಾಮದ ಕೆರೆ ಅಭಿವೃದ್ಧಿಗೆ ಸರ್ಕಾರ 62 ಲಕ್ಷ ರೂ. ಅನುದಾನ ಒದಗಿಸಿದೆ. ಈ ಅನುದಾನ ಸದ್ಬಳಕೆ ಮಾಡಿಕೊಂಡು ಕೆರೆ ಅಭಿವೃದ್ಧಿಪಡಿಸುವ ಮೂಲಕ ಅಂತರ್ಜಲ ವೃದ್ಧಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ರವಿ ಮೂಲಿಮನಿ, ಫಾರೂಕ್ ಹುಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here