ಸೆ. 22ರಂದು`ಲಕ್ಷ್ಮೇಶ್ವರದ ಸಾಮ್ರಾಟ್’ ವಿಸರ್ಜನೆ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದ ಬಳಿ ಶ್ರೀ ರಾಘವೇಂದ್ರ ಯುವಕ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾದ ಲಕ್ಷ್ಮೇಶ್ವರದ ಸಾಮ್ರಾಟ್ ಗಣೇಶನ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಸೆ. 22ರಂದು ಮಧ್ಯಾಹ್ನ 2 ಗಂಟೆಯಿಂದ ಬೃಹತ್ ಶೋಭಾಯಾತ್ರೆಯೊಂದಿಗೆ ನಡೆಯಲಿದೆ.

Advertisement

ಸಂಘಟನೆಯು ಕಳೆದ 27 ದಿವಸಗಳಿಂದ ಸಂಪ್ರದಾಯಬದ್ಧವಾಗಿ ಪೂಜೆ ನೆರವೇರಿಸುತ್ತಿದೆ. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀ ರಾಘವೇಂದ್ರ ಯುವಕ ಸಂಘದ ಪ್ರಕಟಣೆ ವಿನಂತಿಸಿದೆ.

 


Spread the love

LEAVE A REPLY

Please enter your comment!
Please enter your name here