ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ತನ್ನ ಮನೆ ನಿರ್ಮಾಣದ ಸಂದರ್ಭದಲ್ಲಿ ಚಿನ್ನಾಭರಣಗಳ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಬಾಲಕ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಗುರುವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿವೇಶನವನ್ನು ವಿತರಿಸಿದರು.
ಈ ಕುರಿತು ಮಾಹಿತಿ ನೀಡಿದ ಅಭಿವೃದ್ಧಿ ಅಧಿಕಾರಿ ಅಮೀರನಾಯಕ, ಮಾರುತಿ ನಗರದ 7 ಎಕರೆ ಕ್ಷೇತ್ರದಲ್ಲಿಯ 274/4ರ ಸರ್ವೇಯಲ್ಲಿ ನಿವೇಶನವನ್ನು ವಿತರಿಸಲಾಗಿದ್ದು, ಸ್ಥಳದಲ್ಲಿ ಜಿ.ಪಿ.ಎಸ್ ಭಾವಚಿತ್ರವನ್ನು ತೆಗೆಯಲಾಗಿದೆ ಎಂದು ತಿಳಿಸಿದರು.



