ಹಾಸನ : ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತ ಹಿನ್ನೆಲೆ ಸಂಚಾರ ಸ್ಥಗಿತ ಮಾಡಲಾಗಿದೆ.
Advertisement
ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂಕುಸಿತ ಉಂಟಾದ ಹಿನ್ನೆಲೆ, ಹೀಗಾಗಿ ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತ ಮಾಡಲಾಗಿದೆ.
ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿದೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಟ ನಡೆಸಿದ್ದು, ರೈಲಿನಲ್ಲಿ ಸಾವಿರಾರು ಪ್ರಯಾಣಿಕರು ಕುಳಿತಿದ್ದಾರೆ.
ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ನಿಂತಿದ್ದು, ಸಕಲೇಶಪುರ, ಯಡಕುಮಾರಿ, ಶಿರವಾಗಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿದೆ.
ಪರ್ಯಾಯ ವಾಹನ ವ್ಯವಸ್ಥೆ ಮಾಡುವಂತೆ ಒತ್ತಾಯ ಮಾಡಲಾಗಿದೆ.