HomeEntertainment93 ದಿನಗಳ ಬಳಿಕ ಜೈಲಿಂದ ಬಿಡುಗಡೆ ಆದ ಲಾಯರ್ ಜಗದೀಶ್: ಪೊಲೀಸ್ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ...

93 ದಿನಗಳ ಬಳಿಕ ಜೈಲಿಂದ ಬಿಡುಗಡೆ ಆದ ಲಾಯರ್ ಜಗದೀಶ್: ಪೊಲೀಸ್ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ ಮಾಜಿ ಬಿಗ್‌ ಬಾಸ್‌ ಸ್ಪರ್ಧಿ

For Dai;y Updates Join Our whatsapp Group

Spread the love

ಬರೋಬ್ಬರಿ 93 ದಿನಗಳ ಕಾಲ ಜೈಲಿನಲ್ಲಿದ್ದ ಮಾಜಿ ಬಿಗ್​ಬಾಸ್ ಸ್ಪರ್ಧಿ, ಲಾಯರ್‌ ಜಗದೀಶ್‌ ಇದೀಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಮಾಡಿದ್ದಾರೆ. ಜನವರಿ 24ರಂದು ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದು. ಇದೀಗ 93 ದಿನಗಳ ಬಳಿಕ ಜೈಲಿಂದ ಹೊರಬಂದಿದ್ದಾರೆ.

ಫೇಸ್​ಬುಕ್​​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ, ನಾನು, PSI ಹಗರಣವನ್ನು ಬಯಲು ಮಾಡಿದ್ದು , ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡನ್ನು ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ಧು , ಇವೆಲ್ಲವೂ ನನ್ನ ಹೋರಾಟದ ಭಾಗ’ ಎಂದಿದ್ದಾರೆ.

‘ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ’ ಎಂದಿದ್ದಾರೆ ಲಾಯರ್ ಜಗದೀಶ್.‌

ಜಗದೀಶ್ ನಿವಾಸವಿರುವ ಕೊಡಿಗೇಹಳ್ಳಿಯಲ್ಲಿ ಅಣ್ಣಮ್ಮ ದೇವಿ ಉತ್ಸವದ ವಿಚಾರವಾಗಿ ಲಾಯರ್‌ ಜಗದೀಶ್ ಹಾಗೂ ಸ್ಥಳೀಯರ ನಡುವೆ ದೊಡ್ಡ ಗಲಾಟೆ ನಡೆದಿತ್ತು. ಈ ವೇಳೆ ಕಾನೂನು ಬಾಹಿರವಾಗಿ ಬಂದೂಕು ಬಳಕೆ ಮಾಡಿದ ಆರೋಪದ ಮೇಲೆ ಜಗದೀಶ್‌ ಹಾಗೂ ಅವರ ಗನ್​ಮ್ಯಾನ್ ಅನ್ನು ಪೊಲೀಸರು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಮಾತ್ರ ಬಳಸಲು ಲೈಸೆನ್ಸ್ ಪಡೆದಿದ್ದ ಬಂದೂಕನ್ನು ಕೊಡಿಗೇಹಳ್ಳಿಯಲ್ಲಿ ಬಳಸಲಾಗಿತ್ತು. ಈ ಘಟನೆಗೆ ಆದ ಬಳಿಕ ಜಗದೀಶ್ ಅವರದ್ದು ಎನ್ನಲಾದ ಕೆಲ ವಿಡಿಯೋಗಳು ವೈರಲ್ ಆದವು. ಜಗದೀಶ್ ತಮ್ಮ ಮನೆಯ ಮುಂದೆ ದೊಣ್ಣೆ ಹಿಡಿದುಕೊಂಡು ಕೆಲವರನ್ನು ಹೊಡೆದಿದ್ದು, ಸ್ಥಳೀಯರ ಮೇಲೆ ಸುಖಾ ಸುಮ್ಮನೆ ಖ್ಯಾತೆ ತೆಗೆದ ವಿಡಿಯೋಗಳು ವೈರಲ್ ಆದ ಬಳಿಕ ಅವರನ್ನು ಬಂಧಿಸಲಾಗಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!