ಬೆಂಗಳೂರು : ವಕೀಲೆ ಎಸ್. ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ಈ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಇತ್ತೀಚಿಗೆ ಬೋವಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸಿದ್ದ 33 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೀವಾ ಬರೆದಿಟ್ಟಿರುವ 13 ಪುಟಗಳ ಡೆತ್ನೋಟ್ ಪತ್ತೆಯಾಗಿತ್ತು.
ಈ ಡೆತ್ನೋಟ್ನಲ್ಲಿ, ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖಾಧಿಕಾರಿಗಳು ಹಲವು ಬಾರಿ ವಿಚಾರಣೆಗೆ ಕರೆಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ತನಿಖಾಧಿಕಾರಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ ಜೀವಾ ಉಲ್ಲೇಖಿಸಿದ್ದರು. ಡೆತ್ನೋಟ್ ಹಾಗೂ ಜೀವಾ ಸಹೋದರಿ ಸಂಗೀತಾ ನೀಡಿದ ದೂರಿನ ಅನ್ವಯ DySP ಕನಕಲಕ್ಷ್ಮಿ ವಿರುದ್ಧ ಬನಶಂಕರಿ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅನ್ವಯ FIR ದಾಖಲಾಗಿತ್ತು.
ಇದೀಗ ಜೀವಾ ಆತ್ಮಹತ್ಯೆ ಪ್ರಕರಣವನ್ನು ಪ್ರಕರಣದ ಮುಂದಿನ ತನಿಖೆಯನ್ನ ಸಿಸಿಬಿಗೆ ವಹಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಸಿಸಿಬಿಯ ಎಸಿಪಿ ಮಟ್ಟದ ಅಧಿಕಾರಿಯ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದ್ದು, ಪ್ರಕರಣದ ಪ್ರಾಥಮಿಕ ತನಿಖೆಯ ದಾಖಲೆಗಳನ್ನು ಹಸ್ತಾಂತರಿಸಲಾಗಿದೆ.