ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಜುಲೈ 7ರ ಬೆಳಿಗ್ಗೆ 11ಕ್ಕೆ ನಡೆಯಲಿರುವ ಬಸವದಳದ 1601ನೇ ಶರಣ ಸಂಗಮದಲ್ಲಿ ವಚನ ಸಂಶೋಧನೆ ಪಿತಾಮಹ ಶರಣ ಫ.ಗು. ಹಳಕಟ್ಟಿಯವರ 144ನೇ ಜಯಂತಿ ಅಂಗವಾಗಿ `ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಅಧ್ಯಕ್ಷತೆಯನ್ನು ಬಸವದಳದ ಅಧ್ಯಕ್ಷ, ಶರಣ ವಿ.ಕೆ. ಕರೇಗೌಡ್ರ ವಹಿಸುವರು. ಅಂಬಿಗ ಚೌಡಯ್ಯ ಪ್ರತಿಷ್ಠಾನದ ಅಧ್ಯಕ್ಷ, ಶರಣ ಸಂಗನಬಸವನಶ್ರೀಪಾದ ಎಂ.ಹಾದಿಮನಿ ಉಪನ್ಯಾಸ ಮಾಡುವರು.
ಬಸವದಳದ ಸದಸ್ಯರು, ಶರಣ ಸಾಹಿತ್ಯಾಭಿಮಾನಿಗಳು ಹಾಗೂ ಆಸಕ್ತರು ಭಾಗವಹಿಸಬೇಕೆಂದು ಸಂಘಟಿಕರ ಪರವಾಗಿ ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.



