ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಶಿವಾನಂದ ನಗರದ ಬಸವ ಸಮುದಾಯ ಭವನದಲ್ಲಿ ಸೆ. 28ರಂದು ಬೆಳಿಗ್ಗೆ 10ಕ್ಕೆ ನಡೆಯಲಿರುವ ಬಸವದಳದ 1665ನೇ ಶರಣ ಸಂಗಮದಲ್ಲಿ `ಲಿಂಗಾಯತ ಸ್ವತಂತ್ರ ಧರ್ಮ – ಒಂದು ಚಿಂತನೆ’ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
Advertisement
ಅಧ್ಯಕ್ಷತೆಯನ್ನು ಬಸವದಳದ ಅಧ್ಯಕ್ಷ, ಶರಣ ವಿ.ಕೆ. ಕರೇಗೌಡ್ರ ವಹಿಸುವರು. ಉಪನ್ಯಾಸಕಿ, ಶರಣೆ ಡಾ. ಗಿರಿಜಾ ಹಸಬಿ ಉಪನ್ಯಾಸ ಮಾಡುವರು. ಬಸವದಳದ ಸದಸ್ಯರು, ಶರಣ ಸಾಹಿತ್ಯಾಭಿಮಾನಿಗಳು ಹಾಗೂ ಆಸಕ್ತರು ಭಾಗವಹಿಸಬೇಕೆಂದು ಸಂಘಟಕರ ಪರವಾಗಿ ಪ್ರಕಾಶ ಅಸುಂಡಿಯವರು ವಿನಂತಿಸಿದ್ದಾರೆ.