ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮ ವಿಚಾರ: ಸಚಿವ ಪರಮೇಶ್ವರ್ ಹೇಳಿದ್ದೇನು..?

0
Spread the love

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ ಎನ್ನಲಾಗ್ತಿದೆ. ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷರ ಪತ್ರ ಉಲ್ಲೇಖಿಸಿ ಮಾಹಿತಿ ಕೇಳಿದ ಡಿಜಿ ಕಚೇರಿ ಪತ್ರ ಕೂಡ ವೈರಲ್ ಆಗಿದೆ.

Advertisement

ಇನ್ನೂ ಈ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಆಯೋಗದವ್ರು ಡಿಜಿಪಿಗೆ ಸೂಲಿಬೆಲೆ ಕೇಸ್ ಬಗ್ಗೆ ಮಾಹಿತಿ ಕೇಳಿದ್ದಾರೆ ಎಂದಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಮೇಲಿರುವ ದೂರಿನ ಬಗ್ಗೆ ಮಾಹಿತಿ ತರಿಸಿಕೊಳ್ಳುವ ಸಲುವಾಗಿ ಎಲ್ಲಾ ಎಸ್ಪಿಗಳಿಗೆ ಕೇಳಿದ್ದಾರೆ.

ನನಗೆ ಗೊತ್ತಿರುವ ಹಾಗೆ ಇಷ್ಟೇ ಮಾಹಿತಿ. ಗಡಿಪಾರಿನ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಇತ್ತೀಚಿಗಷ್ಟೇ ಪ್ರಚೋದಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಮೇಲೆ RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟ ಕೇಸ್ ದಾಖಲಾಗಿತ್ತು. ಇದೀಗ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ ಎನ್ನಲಾಗ್ತಿದೆ.


Spread the love

LEAVE A REPLY

Please enter your comment!
Please enter your name here