ವಿಜಯಪುರ: ಜಿಲ್ಲೆಯಲ್ಲಿ ಪದೇ ಪದೇ ಚಿರತೆ ದಾಳಿ ನಡೆಯುತ್ತಿದ್ದು, ಸಾಕು ಪ್ರಾಣಿಗಳು ಬಲಿಯಾಗುತ್ತಿರುವ ಘಟನೆಗಳು ಜನರಲ್ಲಿ ಆತಂಕ ಮೂಡಿಸಿವೆ. ಇದೀಗ ಮತ್ತೊಮ್ಮೆ ಚಿರತೆ ದಾಳಿ ಮಾಡಿದ ಪರಿಣಾಮ ಹಸು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ತದ್ದೇವಾಡಿ ಗ್ರಾಮದಲ್ಲಿ ನಡೆದಿದೆ.
ಚಿರತೆ ದಾಳಿಯಿಂದ ಹಸು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ಹಲವು ದಿನಗಳಿಂದ ತದ್ದೇವಾಡಿ ಹಾಗೂ ಮಣಂಕಲಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿಗೆ ಸಾಕು ಪ್ರಾಣಿಗಳು ಬಲಿಯಾಗುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿರತೆಯನ್ನು ಪತ್ತೆಹಚ್ಚಿ ಸೆರೆಹಿಡಿಯಲು ತದ್ದೇವಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ತಕ್ಷಣ ಕಾರ್ಯಾಚರಣೆ ನಡೆಸಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.



