ಚಾಮರಾಜನಗರ:– ಚಾಮರಾಜನಗರ ತಾಲ್ಲೂಕು ಮಹಂತಾಳಪುರದಲ್ಲಿ ಕೊಟ್ಟಿಗೆಗೆ ನುಗ್ಗಿ ಕರುವನ್ನು ಚಿರತೆ ಕೊಂದು ತಿಂದಿರುವ ಘಟನೆ ಜರುಗಿದೆ. ಘಟನೆಯಿಂದ ಜನರು ತೀವ್ರ ಆತಂಕಗೊಂಡಿದ್ದಾರೆ.
Advertisement
ಕಮಲಮ್ಮ ಎಂಬವರಿಗೆ ಸೇರಿದ ಕರುವನ್ನು ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು. ಈ ವೇಳೆ ಚಿರತೆ ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದು ಮುಗಿಸಿದೆ.
ಕೆಲ ದಿನಗಳ ಹಿಂದೆ ಗ್ರಾಮದ ಹೊರವಲಯದಲ್ಲಿ ಮೇಯುತ್ತಿದ್ದಾಗ ಎರಡು ಕುರಿಮರಿಗಳನ್ನು ಚಿರತೆ ಕೊಂದು ಹಾಕಿತ್ತು. ಇದೀಗ ಗ್ರಾಮಕ್ಕೇ ನುಗ್ಗಿ ಕರು ತಿಂದಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಚಿರತೆ ಆತಂಕ ಮನೆ ಮಾಡಿದೆ.
ಕೊನೆಗೆ ಗ್ರಾಮಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಚಿರತೆ ಸೆರೆ ಹಿಡಿಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಸಿಬ್ಬಂದಿಗೆ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.