ಲಕ್ಕುಂಡಿಯ ವೈಭವ ಮರುಕಳಿಸಿ ಜಗತ್ತಿಗೆ ತೋರಿಸುವಂತಾಗಲಿ: ಸಚಿವ ಎಚ್.ಕೆ ಪಾಟೀಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಲಕ್ಕುಂಡಿಯ ಇತಿಹಾಸ, ಪರಂಪರೆ, ಸಂಸ್ಕೃತಿ ಶ್ರೀಮಂತಿಕೆ, ಶಿಲ್ಪಕಲೆಗಳು, ಶಾಸನಗಳ  ಜಾಗೃತರಾಗಿ ಲಕ್ಕುಂಡಿಯ ಗತಕಾಲದ ವೈಭವವನ್ನು ಮರುಕಳಿಸಿ ಲಕ್ಕುಂಡಿಯ ಮಹತ್ವವನ್ನು ಜಗತ್ತಿಗೆ ತೋರಿಸಿ ಯುನೆಸ್ಕೋ ಪಟ್ಟಿಗೆ ಸೇರಿಸುವಂತೆ ಮಾಡಬೇಕು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

Advertisement

ಗದಗ ತಾಲೂಕಿನ ಲಕ್ಕುಂಡಿಯ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

101 ಬಾವಿ, 101 ದೇವಸ್ಥಾನಗಳ ಇತಿಹಾಸ ಹೊಂದಿರುವ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಸಂಗ್ರಹಣೆ ಮೂಲಕ ಹುದುಗಿ ಹೋಗಿರುವ ದೇವಸ್ಥಾನ ಹಾಗೂ ಬಾವಿಗಳ ಅನ್ವೇಷಣೆ ಹಾಗೂ ಮರುಸೃಷ್ಟಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಲಕ್ಕುಂಡಿಯಲ್ಲಿರುವ ಶಾಸನಗಳು ಹಾಗೂ ಶಿಲ್ಪಕಲೆಗಳನ್ನು ಕೆಲವರು ಮನೆಗಳನ್ನಾಗಿ ಮಾಡಿಕೊಂಡಿದ್ದಾರೆ, ಕೆಲವರು ಕುರಿ, ಆಕಳು ಕಟ್ಟಿದ್ದಾರೆ. ಅವುಗಳ ಮಹತ್ವ ತಿಳಿಸಿ ಅವುಗಳನ್ನು ಒಂದೆಡೆ ಸಂಗ್ರಹಿಸಿ, ಸಂರಕ್ಷಿಸೋಣ ಎಂದರು.

ಲಕ್ಕುಂಡಿಯಲ್ಲಿ ಕೈಗೊಂಡಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ರಾಜ್ಯಕ್ಕೆ ದಿಕ್ಸೂಚಿಯಾಗಬೇಕು. ಇದರ ಪ್ರೇರಣೆ ಕರ್ನಾಟಕದ ತುಂಬೆಲ್ಲ ಹರಡಬೇಕು. ಜೀರ್ಣೋದ್ಧಾರ ಆಗಬೇಕು ಎಂದು ಸಚಿವ ಎಚ್.ಕೆ. ಪಾಟೀಲ ಆಶಿಸಿದರು.

ನರಗುಂದ ಶಾಸಕ ಸಿ.ಸಿ. ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಈ ರೀತಿಯ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮ ಪ್ರಥಮ ಬಾರಿಗೆ ನಡೆಯುತ್ತಿದೆ. ದಾನ ಚಿಂತಾಮಣಿ ಅತ್ತಿಮಬ್ಬೆಯ ಕರ್ಮಭೂಮಿ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿದ್ದು ಸಂತಸ ತಂದಿದೆ ಎಂದರು.

ಪ್ರಚ್ಯಾವಶೇಷಗಳನ್ನು ಸಂಗ್ರಹಣೆ ಮಾಡಿ ಸೂಕ್ತ ಸ್ಥಳದಲ್ಲಿ ಇಟ್ಟು ಮುಂದಿನ ಪೀಳಿಗೆಗೆ ಹಿಂದಿನ ಕಾಲದ ವೈಭವದ ಕುರುಹುಗಳನ್ನು ನೆನೆಪಿಸುವ ಕಾರ್ಯಕ್ರಮ ಇದಾಗಿದೆ. ಮುಂದಿನ ದಿನಗಳಲ್ಲಿ ಇಂದಿನ ಪ್ರಚ್ಯಾವಶೇಷಗಳ ಅನ್ವೇಷಣೆ ಕಾರ್ಯವು ಮಾದರಿಯಾಗಿ ದೇಶದಲ್ಲಿರುವ ಅನೇಕ ಗ್ರಾಮಗಳಲ್ಲಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆ ನಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ.ಆರ್. ಪಾಟೀಲ, ಲಕ್ಕುಂಡಿ ಗ್ರಾ.ಪಂ ಅಧ್ಯಕ್ಷ ಕೆಂಚಪ್ಪ ಎಸ್.ಪೂಜಾರ್, ಉಪಾಧ್ಯಕ್ಷೆ ಪುಷ್ಪಾ ಎಸ್.ಪಾಟೀಲ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ವಾಸಣ್ಣ ಕುರಡಗಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ. ಕೆ.ವಿ. ರಾಜೇಂದ್ರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಮೈಸೂರಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತ ದೇವರಾಜು.ಎ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಗ್ರಾಮೀಣಾಭಿವೃದ್ಧಿ ವಿ.ವಿ ಕುಲಪತಿ ಪ್ರೊ. ಸುರೇಶ ನಾಡಗೌಡರ, ಜಾನಪದ ವಿ.ವಿ ಕುಲಪತಿ ಟಿ.ಎಂ. ಬಾಸ್ಕರ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಮಿತಿ ಸದಸ್ಯರುಗಳಾದ ಸಿದ್ಧಲಿಂಗೇಶ್ವರ ಪಾಟೀಲ, ರಾವ್, ಅ.ಧ. ಕಟ್ಟಿಮನಿ, ಉಮೇಶಗೌಡ ಪಾಟೀಲ, ಹನುಮಾಕ್ಷಿ ಬೋಗಿ, ಹಂಪಿ ವಿಶ್ವವಿದ್ಯಾಲಯ ಕುಲಪತಿ ಡಿ.ವಿ. ಪರಮಶಿವಮೂರ್ತಿ, ದೇವರಕೊಂಡ ರೆಡ್ಡಿ, ಲಕ್ಕುಂಡಿ ಗ್ರಾ.ಪಂ ಸದ್ಯಸರು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here