ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಏಕೀಕರಣಗೊಂಡು 69 ವರ್ಷಗಳು ಪೂರ್ಣಗೊಂಡಿದ್ದು, ಎಲ್ಲೆಡೆ ಸುಖ, ಶಾಂತಿ ನೆಲೆಸುವಂತಾಗಲಿ. ಆಲೂರು ವೆಂಕಟರಾಯರು, ಬಿ.ಎಂ. ಶ್ರೀಕಂಠಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕುವೆಂಪು, ಶಿವರಾಂ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಹೀಗೆ ಅನೇಕರು ಕನ್ನಡದ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದು ಪ್ರಧಾನ ಅಂಚೆ ಪಾಲಕರಾದ ಮಂಜುಳಾ ದೇಗಿನಾಳ ಹೇಳಿದರು.
ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರೂ ದಿನನಿತ್ಯ ವ್ಯವಹಾರ ಮತ್ತು ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಕನ್ನಡ ಬಳಸುವುದರೊಂದಿಗೆ ಜನಸಾಮಾನ್ಯರೂ ಕನ್ನಡ ಕಟ್ಟುವ ಕೆಲಸವನ್ನು ಮಾಡಬೇಕು ಎಂದರು.
ಉಪ ಅಂಚೆ ಪಾಲಕರಾದ ದೊಡ್ಡಪ್ಪ ಇಟಗಿ, ವೀರಣ್ಣ ಅಂಗಡಿ, ವೆಂಕಟೇಶ ಆಕಳವಾಡಿ, ಸಾವಿತ್ರಿ ಮಲ್ಲಾಡದ, ಸೌಮ್ಯ, ಯಂಕಪ್ಪ ಗುಗ್ಗರಿ, ಸಿದ್ಧಲಿಂಗೇಶ ಯಂಡಿಗೇರಿ, ಮಂಜುನಾಥ ಪಾಮೇನಹಳ್ಳಿ, ವಾಣಿ ಮಾಂಡ್ರೆ, ಸರೋಜ ಪಟ್ಟಣಶೆಟ್ಟಿ, ವಿದ್ಯಾ ಗದಗ, ಶ್ರೀದೇವಿ ಕಲಕೇರಿ, ಬಸವರಾಜ ಮೊರಬದ, ಜಾಫರ್ ನದಾಫ್, ಉಮೇಶ ಸಂದಿಮನಿ, ರವಿ ಜಾದವ, ಶಿವಕುಮಾರ ಸುಳ್ಳದ, ಶಿವರಾಜ ಕ್ಷತ್ರಿಯವರ, ಕುಮಾರ ಅರಿಸಿದ್ಧಿ ಮತ್ತಿತರರು ಪಾಲ್ಗೊಂಡಿದ್ದರು.


