ವಿಜಯಪುರ:- ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ, ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರನಂತೆ ವಸೂಲಿಗೆ ನಿಂತಿದ್ದಾನೆ. ವಿಜಯೇಂದ್ರ ಕಡೆ ರಾತ್ರಿ ಟ್ರೇನಿಂಗ್ ತೆಗೆದುಕೊಳ್ಳುತ್ತಾನಂತೆ. ಹೇಗೆ ನಕಲಿ ಸಹಿ ಮಾಡಬೇಕು ಅಂತ ತಿಳಿಸಿಕೊಳ್ಳುತ್ತಿದ್ದಾನೆ ಟ್ರೇನಿಂಗ್ ಕೊಡುವ ಮಾಸ್ಟರ್ ನಮ್ಮವನೇ. ಹೀಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡುವುದಿಲ್ಲ, ಡಿಕೆಶಿ ಸಿಎಂ ಆಗುವುದಿಲ್ಲ. ವಿಧಾನಸಭೆ ವಿಸರ್ಜನೆ ನಿಶ್ಚಿತ ಎಂದಿದ್ದಾರೆ.
ಗದ್ದುಗೆ ಗುದ್ದಾಟ ಜಗಳ ವಿಧಾನಸಭೆ ವಿಸರ್ಜನೆವರೆಗೆ ಬಂದ್ರೆ ಆಶ್ಚರ್ಯ ಇಲ್ಲ. ಡಿಕೆಶಿ ಅವರಿಗೆ ಡೂ ಆರ್ ಡೈ ಇದೆ. ಸಿದ್ದರಾಮಯ್ಯ ಅವರಿಗೆ ಏನಿದೆ ಇನ್ನೊಮ್ಮೆ ಸಿಎಂ ಆಗಲ್ಲ, ಹೇಗಿದ್ರೂ ಮನೆಗೆ ಹೋಗುತ್ತೇನೆ ಅಂತಾ ಗೊತ್ತಿದೆ. ನನ್ನ ಮಗ ಅಂತ್ರೂ ಅಷ್ಟು ಯೋಗ್ಯನಲ್ಲ ಅಂತಾ ಗೊತ್ತಾಗಿದೆ. ವಿಸರ್ಜನೆ ಆಗೇ ಆಗುತ್ತೆ, ಮುಂದೆ ಮತ್ತೆ ಒಳ್ಳೆಯ ಸರ್ಕಾರ ಬರುತ್ತೆ. ರಾಜ್ಯದಲ್ಲಿ ನಡೆದಿರುವ ಭೂಕಬಳಿಕೆ, ಹಿಂದೂ ದೇವಸ್ಥಾನಗಳಿಗೆ ಕಲ್ಲು ಎಸೆಯು ವುದು. ನಿನ್ನೆ ಒಂದು ಮೂರ್ತಿ ಭಗ್ನ ಮಾಡಿದ್ದಾರೆ. ಇದೆಕ್ಕೆಲ್ಲ ಶಾಶ್ವತ ಪರಿಹಾರ ಅಂದ್ರೆ ನಮ್ಮ ಜೆಸಿಬಿ ಒಂದೇ ಎಂದು ಹೇಳಿದ್ದಾರೆ.



